10:06 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ ಜೀಪ್ ಪತ್ತೆ; ಚಾಲಕನ ಕುರುಹು ಅಲಭ್ಯ

25/07/2025, 20:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳಸ ತಾಲೂಕಿನ ಕೊಳಮಾಗೆಯಲ್ಲಿ ಜೀಪೊಂದು ಭದ್ರಾ ನದಿಗೆ ಬಿದ್ದು ಚಾಲಕ ನೀರು ಪಾಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯರ ಸತತ 23 ತಾಸುಗಳ ಕಾರ್ಯಾಚರಣೆ ಬಳಿಕ ಜೀಪ್ ಪತ್ತೆಯಾಗಿದೆ. ಆದರೆ, ಜೀಪ್ ಚಾಲಕನ ಯಾವುದೇ ಕುರುಹು ಪತ್ತೆಯಾಗಿಲ್ಲ.
ಭದ್ರಾ ನದಿಯಲ್ಲಿ ಪತ್ತೆಯಾದ ಪಿಕಪ್ ಜೀಪ್ ನಿನ್ನೆ ಭದ್ರಾ ನದಿಗೆ ಜೀಪ್ ಉರುಳಿದ ಪರಿಣಾಮ ಅವರ ಚಾಲಕ 23ರ ಹರೆಯದ ಶಮಂತ್ ನೀರು ಪಾಲಾಗಿದ್ದ. ಸುದ್ದಿ ತಿಳಿದು ಆತನ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಇದೀಗ ಸತತ 23 ತಾಸುಗಳ ಶೋಧ ಕಾರ್ಯಾಚರಣೆ ಬಳಿಕ
ಜೀಪನ್ನು ಮೇಲಕ್ಕೆತ್ತಲಾಗಿದೆ.
ಆದರೆ ಜೀಪ್ ನಲ್ಲಿ ಚಾಲಕ ಶಮಂತ್‌ ಕುರುಹು ಪತ್ತೆಯಾಗಿಲ್ಲ. ಶಮಂತ್ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.
ನಿನ್ನೆ ಸಂಜೆ ತಾಯಿ ಹಾಗೂ ಕಾರ್ಮಿಕರನ್ನ ಕರೆದುಕೊಂಡು ಬರಲು ವೇಳೆ ಈ ದುರ್ಘಟನೆ ನಡೆದಿತ್ತು.ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಜೀಪ್ ಉರುಳಿತ್ತು.ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು