11:02 AM Saturday29 - March 2025
ಬ್ರೇಕಿಂಗ್ ನ್ಯೂಸ್
Chikkamagaluru | ಬಾಲ ಹಿಡಿದು ಎತ್ತಿದ ಉರಗ ತಜ್ಞರು: ನುಂಗಿದ್ದ 10 ಮೊಟ್ಟೆಗಳನ್ನು… Speaker Talking | ವಿಧಾನ ಸೌಧಕ್ಕೆ ವರ್ಣರಂಜಿತ ದೀಪಾಲಂಕಾರ; ಯಾವಾಗ ಉದ್ಘಾಟನೆ?; ಸ್ಪೀಕರ್… ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ: ಹಾಲು ದರ ಏರಿಕೆಗೆ ಕೇಂದ್ರ… ಕೋಲಾರ ಜಿಲ್ಲೆಯಲ್ಲಿ ಸುಮಾರು 10 ಸಾವಿರ ಎಕರೆ ಅರಣ್ಯ ಭೂಮಿ ಒತ್ತುವರಿ; ತೇರಹಳ್ಳಿ… Protest in Delhi | ‘ಉದ್ಯೋಗ ಕೊಡಿ ಅಥವಾ ಅಧಿಕಾರ ತ್ಯಜಿಸಿ’: ಕೇಂದ್ರ… Medical College | ಗದಗ ಮೆಡಿಕಲ್ ಕಾಲೇಜಿಗೆ ಕೆ.ಎಚ್. ಪಾಟೀಲ್ ಹೆಸರು: ರಾಜ್ಯ… BJP Internal War | ಯಡಿಯೂರಪ್ಪ ಕುಟುಂಬದ ಕಟು ಟೀಕೆಕಾರ ಯತ್ನಾಳ್ ಗೆ… Protest | ಯಾದಗಿರಿ: ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ನೀರು ಆಗ್ರಹಿಸಿ ಬೃಹತ್… ಮೂಡಿಗೆರೆ ಸುತ್ತಮುತ್ತ ಧಾರಾಕಾರ ಮಳೆ: ಬಾಳೂರಿನ ಕಲ್ಲಕ್ಕಿಯ ಮುಖ್ಯ ರಸ್ತೆಗೆ ಉರುಳಿದ ಮರ ನಮ್ಮ ಭಾರತೀಯ ಸಂಸ್ಕೃತಿ, ಆಯುರ್ವೇದ ದೇಶದ ಆಸ್ತಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

Chikkamagaluru | ಅಪ್ರಾಪ್ತ ವಯಸ್ಸಿನ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿಯ ಅಪಹರಣ: ಲವ್ ಜಿಹಾದ್ ಆರೋಪ

26/03/2025, 16:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕು ದಂದೂರು ಗ್ರಾಮದ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳನ್ನು ಅಪಹರಿಸಲಾಗಿದ್ದು, ಲವ್ ಜಿಹಾದ್ ಆರೋಪ ಕೇಳಿ ಬಂದಿದೆ.
ಅಫ್ರೋಜ್ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋದ ಬಗ್ಗೆ ದೂರು ನೀಡಲಾಗಿದೆ.


ಪ್ರೀತಿ ಹೆಸರಲ್ಲಿ 17 ವರ್ಷದ ಬಾಲಕಿಯನ್ನು ಅಫ್ರೋಜ್ ಅಪಹರಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಬಾಲಕಿ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ಹಾಸ್ಟೆಲ್ ನಲ್ಲಿದ್ದು ಪ್ಯಾರಾ ಮೆಡಿಕಲ್ ಓದುತ್ತಿದ್ದಳು. ಪೋಷಕರಿಗೆ ಅಫ್ರೋಜ್ ಎಂಬ ಯುವಕನ ಜೊತೆ ಆಕೆ ಓಡಾಡುತ್ತಿರುವ ಮಾಹಿತಿ ಲಭಿಸಿತ್ತು. ನಂತರ ಪೊಷಕರು ಆಕೆಯನ್ನು ಕಾಲೇಜು ಬಿಡಿಸಿ ಮನೆಗೆ ಕರೆತಂದು ಸಂಬಂಧಿಕರ ಮನೆಯಲ್ಲಿ ಬಿಟ್ಟಿದ್ದರು.
ಮೂರು ತಿಂಗಳಿಂದ ಬಾಲಕಿ ಸಂಬಂಧಿಕರ ಮನೆಯಲ್ಲಿದ್ದಳು. ಈ ನಡುವೆ ದೋರನಾಳು ಗ್ರಾಮದಲ್ಲಿ ಸಂಬಂಧಿಯೊಬ್ಬರು ಸಾವಿಗೀಡಾಗಿದ್ದು, ಮನೆಯವರು ಅಲ್ಲಿಗೆ ಹೋಗಿದ್ದರು. ಈ ಸಂದರ್ಭದಲ್ಲಿ ಅಫ್ರೋಜ್ ಅಪ್ರಾಪ್ತೆಯನ್ನು ಮನೆಯಿಂದ ಅಪಹರಿಸಿಕೊಂಡೋಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಅಜ್ಜಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಚಿಕ್ಕಮಗಳೂರು ಪೋಕ್ಸೋ ಕೋರ್ಟ್ ಗೆ ಹಾಜರು ಸಾಧ್ಯತೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು