4:33 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Chikkamagaluru | ಅಪ್ರಾಪ್ತ ವಯಸ್ಸಿನ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿಯ ಅಪಹರಣ: ಲವ್ ಜಿಹಾದ್ ಆರೋಪ

26/03/2025, 16:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕು ದಂದೂರು ಗ್ರಾಮದ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳನ್ನು ಅಪಹರಿಸಲಾಗಿದ್ದು, ಲವ್ ಜಿಹಾದ್ ಆರೋಪ ಕೇಳಿ ಬಂದಿದೆ.
ಅಫ್ರೋಜ್ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋದ ಬಗ್ಗೆ ದೂರು ನೀಡಲಾಗಿದೆ.


ಪ್ರೀತಿ ಹೆಸರಲ್ಲಿ 17 ವರ್ಷದ ಬಾಲಕಿಯನ್ನು ಅಫ್ರೋಜ್ ಅಪಹರಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಬಾಲಕಿ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ಹಾಸ್ಟೆಲ್ ನಲ್ಲಿದ್ದು ಪ್ಯಾರಾ ಮೆಡಿಕಲ್ ಓದುತ್ತಿದ್ದಳು. ಪೋಷಕರಿಗೆ ಅಫ್ರೋಜ್ ಎಂಬ ಯುವಕನ ಜೊತೆ ಆಕೆ ಓಡಾಡುತ್ತಿರುವ ಮಾಹಿತಿ ಲಭಿಸಿತ್ತು. ನಂತರ ಪೊಷಕರು ಆಕೆಯನ್ನು ಕಾಲೇಜು ಬಿಡಿಸಿ ಮನೆಗೆ ಕರೆತಂದು ಸಂಬಂಧಿಕರ ಮನೆಯಲ್ಲಿ ಬಿಟ್ಟಿದ್ದರು.
ಮೂರು ತಿಂಗಳಿಂದ ಬಾಲಕಿ ಸಂಬಂಧಿಕರ ಮನೆಯಲ್ಲಿದ್ದಳು. ಈ ನಡುವೆ ದೋರನಾಳು ಗ್ರಾಮದಲ್ಲಿ ಸಂಬಂಧಿಯೊಬ್ಬರು ಸಾವಿಗೀಡಾಗಿದ್ದು, ಮನೆಯವರು ಅಲ್ಲಿಗೆ ಹೋಗಿದ್ದರು. ಈ ಸಂದರ್ಭದಲ್ಲಿ ಅಫ್ರೋಜ್ ಅಪ್ರಾಪ್ತೆಯನ್ನು ಮನೆಯಿಂದ ಅಪಹರಿಸಿಕೊಂಡೋಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಅಜ್ಜಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಚಿಕ್ಕಮಗಳೂರು ಪೋಕ್ಸೋ ಕೋರ್ಟ್ ಗೆ ಹಾಜರು ಸಾಧ್ಯತೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು