8:19 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

Chikkamagaluru | ಕೊಪ್ಪ: ಪ್ರೀತಿಗೆ ಅಡ್ಡಿಪಡಿಸಿದ ಯುವಕನಿಗೆ ಚೂರಿ ಇರಿದು ಬರ್ಬರ ಕೊಲೆ

20/11/2025, 21:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪ್ರೀತಿಗೆ ಅಡ್ಡಿಪಡಿಸಿದ ಎಂಬ ಕಾರಣಕ್ಕೆ ಯುವಕನೊಬ್ಬನನ್ನು ಇನ್ನೋರ್ವ ಯುವಕ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಕೊಪ್ಪ ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ನಡೆದಿದೆ.
ರಾಜೇಶ್ (27) ಕೊಲೆಯಾದ ವ್ಯಕ್ತಿ. ವರುಣ್ ಕೊಲೆ ಮಾಡಿದ ಆರೋಪಿ.
ರಾಜೇಶ್ ಪತ್ನಿಯ ಸಹೋದರಿಯನ್ನು ವರುಣ್ ಪ್ರೀತಿಸುತ್ತಿದ್ದ. ಈ ಹಿಂದೆ ಇದೇ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು.
ಇಂದು ಪತ್ನಿ ಮನೆಗೆ ಹೋಗಿದ್ದ ರಾಜೇಶ್ ನನ್ನು ವರುಣ್
ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ಬಾಳೆಹೊನ್ನೂರು ಸಮೀಪದ ಬಾಸಾಪುರದಿಂದ ಕಲ್ಕೆರೆ ಗ್ರಾಮಕ್ಕೆ ರಾಜೇಶ್ ಹೋಗಿದ್ದ.
ಚಾಕು ಇರಿತಕ್ಕೊಳಗಾದ ರಾಜೇಶ್ ನನ್ನು ಆಸ್ಪತ್ರೆಗೆ ರವಾನಿಸಿದ್ರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಆರೋಪಿ
ವರುಣ್ ಕೊಪ್ಪ ತಾಲೂಕಿನ ಮಂಡಗದ್ದೆ ಮೂಲದವನು ಎಂದು ತಿಳಿದು ಬಂದಿದೆ.
ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು