3:10 PM Monday3 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

Chikkamagaluru | ಕೊಪ್ಪ: ಪ್ರೀತಿಗೆ ಅಡ್ಡಿಪಡಿಸಿದ ಯುವಕನಿಗೆ ಚೂರಿ ಇರಿದು ಬರ್ಬರ ಕೊಲೆ

20/11/2025, 21:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪ್ರೀತಿಗೆ ಅಡ್ಡಿಪಡಿಸಿದ ಎಂಬ ಕಾರಣಕ್ಕೆ ಯುವಕನೊಬ್ಬನನ್ನು ಇನ್ನೋರ್ವ ಯುವಕ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಕೊಪ್ಪ ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ನಡೆದಿದೆ.
ರಾಜೇಶ್ (27) ಕೊಲೆಯಾದ ವ್ಯಕ್ತಿ. ವರುಣ್ ಕೊಲೆ ಮಾಡಿದ ಆರೋಪಿ.
ರಾಜೇಶ್ ಪತ್ನಿಯ ಸಹೋದರಿಯನ್ನು ವರುಣ್ ಪ್ರೀತಿಸುತ್ತಿದ್ದ. ಈ ಹಿಂದೆ ಇದೇ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು.
ಇಂದು ಪತ್ನಿ ಮನೆಗೆ ಹೋಗಿದ್ದ ರಾಜೇಶ್ ನನ್ನು ವರುಣ್
ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ಬಾಳೆಹೊನ್ನೂರು ಸಮೀಪದ ಬಾಸಾಪುರದಿಂದ ಕಲ್ಕೆರೆ ಗ್ರಾಮಕ್ಕೆ ರಾಜೇಶ್ ಹೋಗಿದ್ದ.
ಚಾಕು ಇರಿತಕ್ಕೊಳಗಾದ ರಾಜೇಶ್ ನನ್ನು ಆಸ್ಪತ್ರೆಗೆ ರವಾನಿಸಿದ್ರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಆರೋಪಿ
ವರುಣ್ ಕೊಪ್ಪ ತಾಲೂಕಿನ ಮಂಡಗದ್ದೆ ಮೂಲದವನು ಎಂದು ತಿಳಿದು ಬಂದಿದೆ.
ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು