12:39 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Chikkamagaluru | ಕೊಟ್ಟಿಗೆಹಾರ: ಡೆಮೋ ಕಾರಿನಿಂದಲೇ ಡಿಸೇಲ್ ಕದ್ದು ಮಾರಾಟ ಮಾಡಿದ ಶೋ ರೂಂ ಸಿಬ್ಬಂದಿ!

19/08/2025, 20:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ-ಬಣಕಲ್ ರಸ್ತೆ ಮಧ್ಯೆ ಶೋ ರೂಂ ಸಿಬ್ಬಂದಿಗಳೇ ಡೆಮೋ ಕಾರಿನಿಂದ ಡಿಸೇಲ್ ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಮಂಗಳೂರಿನಿಂದ ಕಡೂರಿನತ್ತ ಹೊಸ ಟಾಟಾ ಯೋಧ ಕಾರನ್ನು ಶೋ ರೂಂಗೆ ತಲುಪಿಸಲು ಹೊರಟಿದ್ದ ಸಿಬ್ಬಂದಿಗಳು ಮಾರ್ಗಮಧ್ಯೆ ಕಾರಿನ ಇಂಜಿನ್ ಪಕ್ಕದ ಪಂಪ್ ಪೈಪ್ ಬಿಚ್ಚಿ ಸುಮಾರು 10 ಲೀಟರ್ ಡಿಸೇಲ್ ಇಳಿಸಿ ಸ್ಥಳೀಯ ಅಂಗಡಿಗಳಿಗೆ ಮಾರಾಟ ಮಾಡಿದ್ದಾರೆ.


ಕಳ್ಳತನ ಮಾಡಿದ ಹಣದಿಂದ ಎಣ್ಣೆ ಹೊಡೆದು, ನಾನ್ ವೆಜ್ ಊಟ ಮಾಡಿ ವಾಪಸ್ ಹೋದ ಸಿಬ್ಬಂದಿಗಳ ಕಾರ್ಯ ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿದೆ.


ಹೊಸ ವಾಹನಗಳನ್ನು ಶೋ ರೂಂಗಳಿಗೆ ತಲುಪಿಸುವಾಗಲೇ ಸಿಬ್ಬಂದಿಗಳು ಇಂತಹ ದುಷ್ಕೃತ್ಯದಲ್ಲಿ ತೊಡಗಿರುವುದು ಗಂಭೀರವಾಗಿದ್ದು,ಈ ಕುರಿತು ಸ್ಥಳೀಯರು ಕಂಪನಿ ಮಟ್ಟದಲ್ಲಿ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು