1:15 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Chikkamagaluru | ಮಲೆನಾಡ ಗಾಂಧಿ ದಿ. ಎಚ್.ಜಿ. ಗೋವಿಂದೇಗೌಡರ ಮನೆಯಿಂದ ಭಾರೀ ಕಳವು: ಮನೆಗೆಲಸಕ್ಕಿದ್ದ ದಂಪತಿಯಿಂದಲ್ಲೇ ಕೃತ್ಯ!

22/08/2025, 10:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@ail.com

ಮಲೆನಾಡ ಗಾಂಧಿ ಎಂದೇ ಖ್ಯಾತರಾಗಿರುವ ದಿ. ಎಚ್.ಜಿ. ಗೋವಿಂದೇಗೌಡ ಅವರ ಕೊಪ್ಪ ತಾಲೂಕಿನ ಮಣಿಪುರ ಎಸ್ಟೇಟ್ ಮನೆಯಲ್ಲಿ ಕಳ್ಳತನ ನಡೆದಿದ್ದು, ಸುಮಾರು 7 ಲಕ್ಷ ರೂ. ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಆಗಿದೆ

ಅನ್ನ ಕೊಟ್ಟ ಮನೆಗೆ ಕನ್ನವನ್ನು ನೇಪಾಳ ಮೂಲದ ದಂಪತಿ ಮಾಡಿದ್ದಾರೆ. ಮಾಜಿ ಸಚಿವ ದಿ. ಗೋವಿಂದಗೌಡರ ಮನೆಯಲ್ಲಿ ಮನೆಗೆಲಸಕ್ಕಿದ್ದ ದಂಪತಿ ಕಳ್ಳತನ ಮಾಡಿ ನಗದು ಸಹಿತ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಅಂದಾಜು 7 ಲಕ್ಷಕ್ಕೂ ಅಧಿಕ ನಗದು, ಚಿನ್ನಾಭರಣ ದೋಚಿದ್ದಾರೆ.
ಗೋವಿಂದಗೌಡರ ಪುತ್ರ ವೆಂಕಟೇಶ್ ವಾಸವಿರುವ ಕೊಪ್ಪ ತಾಲೂಕಿನ ಮಣಿಪುರ ಎಸ್ಟೇಟ್ ನಲ್ಲಿ ಕಳ್ಳತನ ನಡೆದಿದೆ. ಕಳೆದ 15 ದಿನಗಳ ಹಿಂದಷ್ಟೆ ಕೆಲಸಕ್ಕೆ ಸೇರಿದ ನೇಪಾಳ ಮೂಲದ ದಂಪತಿ ಈ ಕೃತ್ಯವೆಸಗಿದ್ದಾರೆ.
ಮನೆಯವರು ನಿದ್ದೆಗೆ ಜಾರಿದಾಗ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ. ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು