6:36 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

Chikkamagaluru | ಮನೆಯಲ್ಲೇ ವಿವಾಹಿತ ಮಹಿಳೆಯ ಕತ್ತು ಸೀಳಿ ಬರ್ಬರ ಹತ್ಯೆ

02/12/2025, 20:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮನೆಯಲ್ಲೇ ಮಹಿಳೆಯ ಕತ್ತು ಸೀಳಿ ಬರ್ಬರ ಹತ್ಯೆ ಮಾಡಿದ ಭಯಾನಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಅರೆನೂರು ಗ್ರಾಮದಲ್ಲಿ ನಡೆದಿದೆ.
ಸಂಧ್ಯಾ (33) ಹತ್ಯೆಯಾದ ಮೃತ ದುರ್ದೈವಿ. ಸಂಧ್ಯಾ ಅವರ ಕುತ್ತಿಗೆಗೆ ಚಾಕುವಿನಿಂದ ಕೊಯ್ದು ಭೀಕರವಾಗಿ ಕೊಲೆ ಮಾಡಲಾಗಿದೆ. ಮಹಿಳೆ ಮನೆ ಹಿಂದೆ ಕೆಲಸ ಮಾಡುತ್ತಿದ್ದ ವೇಳೆ ಕತ್ತು ಸೀಳಿ ಹಂತಕ ಎಸ್ಕೇಪ್ ಆಗಿದ್ದಾನೆ.
ಬದುಕುವ ಧಾವಂತದಲ್ಲಿ ಸಂಧ್ಯಾ ಅವರು ಮನೆಯೊಳಗೆ ಓಡಿ ಬಂದಿರುವುದರಿಂದ ಮನೆ ತುಂಬಾ ರಕ್ತ ಚೆಲ್ಲಾಡಿದೆ. ಗೋಡೆ ಹಿಡಿದು ಏಳಲು ಯತ್ನಿಸಿರುವುದು ಗೋಡೆ ಮೇಲೆ ಆಕೆಯ ರಕ್ತಮಿಶ್ರಿತ ಹಸ್ತದ ಗುರುತು ಸಾಕ್ಷಿಯಾಗಿದೆ.
ಗಂಡನ ಬಿಟ್ಟು ಸಂಧ್ಯಾ ಅವರು ತವರು ಮನೆ ಸೇರಿದ್ದರು.
ಕಳೆದ ನಾಲ್ಕು ದಿನದಿಂದ ಅವರು ನಾಪತ್ತೆಯಾಗಿದ್ದರು.
ಈ ಸಂಬಂಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ನಿನ್ನೆ ಸಂಜೆ ಅರೆನೂರು ಗ್ರಾಮದ ಮನೆಗೆ ಅವರು ವಾಪಸ್ ಬಂದಿದ್ದರು.ಆದರೆ ಇಂದು ಬರ್ಬರವಾಗಿಹತ್ಯೆಗೀಡಾಗಿದ್ದಾರೆ.ವಆಲ್ದೂರು ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು