11:33 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Chikkamagaluru | ಯುದ್ಧ ಗೆದ್ದು ಬರಲಿ ಭಾರತ: ಕೊಟ್ಟಿಗೆಹಾರದ ಅತ್ತಿಗೆರೆ ಸೋಮೇಶ್ವರನಿಗೆ ವಿಶೇಷ ಪೂಜೆ

08/05/2025, 14:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಭಾರತ ಹಾಗೂ ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ, ಕೊಟ್ಟಿಗೆಹಾರ ಹತ್ತಿರದ ಅತ್ತಿಗೆರೆ ಗ್ರಾಮದಲ್ಲಿ ಭಾರತೀಯ ಸೇನೆಗೆ ಶಕ್ತಿ ಸಿಗಲೆಂದು ಹಾಗೂ ಭಾರತ ಯುದ್ಧದಲ್ಲಿ ಗೆಲುವು ಸಾಧಿಸಲೆಂದು ವಿಶೇಷ ಪೂಜೆ ನಡೆಸಲಾಯಿತು.
ಅತ್ತಿಗೆರೆ ಗ್ರಾಮದ ಪ್ರಸಿದ್ಧ ಸೋಮೇಶ್ವರ ದೇವಾಲಯದಲ್ಲಿ ಗ್ರಾಮಸ್ಥರು ಬೃಹತ್ ಸಂಖ್ಯೆಯಲ್ಲಿ ಸೇರಿ ಪೂಜಾ ಕಾರ್ಯಕ್ರಮ ನಡೆಸಿದರು. ವಿಶೇಷ ಹೋಮ, ಅಭಿಷೇಕ, ಹಾಗೂ ಅರ್ಥಶಾಂತಿ ಯಾಗದ ಮೂಲಕ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿ ದೇಶದ ರಕ್ಷಣೆಗಾಗಿ ಶ್ರದ್ಧಾಪೂರ್ವಕವಾಗಿ ಹಾರೈಸಿದರು.
ಗ್ರಾಮದ ಹಿರಿಯರು, ಮಹಿಳೆಯರು, ಮಕ್ಕಳೂ ಸಹ ಭಾಗವಹಿಸಿದ್ದ ಈ ಪೂಜಾ ಕಾರ್ಯಕ್ರಮದಲ್ಲಿ ದೇಶಭಕ್ತಿಯ ಭಾವನೆ ಉಕ್ಕಿ ಹರಿದುಬಂದಿತು. “ಸೈನಿಕರ ಧೈರ್ಯವರ್ಧನೆಗೆ ಇದು ನಮ್ಮ ಕಡೆಯಿಂದ ಸಣ್ಣ ಕೊಡುಗೆ ಎಂದು ಗ್ರಾಮಸ್ಥರಾದ ನಾಗೇಶ್ ಗೌಡ ಹೇಳಿದರು.
ದೇಶಕ್ಕಾಗಿ ಹೋರಾಡುತ್ತಿರುವ ಯೋಧರಿಗೆ ಈ ಪ್ರಾರ್ಥನೆ ಶಕ್ತಿ ನೀಡಲಿ ಎಂಬದು ಎಲ್ಲರ ಆಶಯವಾಗಿದೆ.
ಇದೊಂದು ದೇಶಭಕ್ತಿಯ ನಿದರ್ಶನವಾಗಿದ್ದು, ಇಡೀ ಗ್ರಾಮದಲ್ಲಿ ದೇಶದ ಪರ ಭಕ್ತಿಯ ಚೈತನ್ಯ ಮೂಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು