9:10 PM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

Chikkamagaluru | ಯುದ್ಧ ಗೆದ್ದು ಬರಲಿ ಭಾರತ: ಕೊಟ್ಟಿಗೆಹಾರದ ಅತ್ತಿಗೆರೆ ಸೋಮೇಶ್ವರನಿಗೆ ವಿಶೇಷ ಪೂಜೆ

08/05/2025, 14:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಭಾರತ ಹಾಗೂ ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ, ಕೊಟ್ಟಿಗೆಹಾರ ಹತ್ತಿರದ ಅತ್ತಿಗೆರೆ ಗ್ರಾಮದಲ್ಲಿ ಭಾರತೀಯ ಸೇನೆಗೆ ಶಕ್ತಿ ಸಿಗಲೆಂದು ಹಾಗೂ ಭಾರತ ಯುದ್ಧದಲ್ಲಿ ಗೆಲುವು ಸಾಧಿಸಲೆಂದು ವಿಶೇಷ ಪೂಜೆ ನಡೆಸಲಾಯಿತು.
ಅತ್ತಿಗೆರೆ ಗ್ರಾಮದ ಪ್ರಸಿದ್ಧ ಸೋಮೇಶ್ವರ ದೇವಾಲಯದಲ್ಲಿ ಗ್ರಾಮಸ್ಥರು ಬೃಹತ್ ಸಂಖ್ಯೆಯಲ್ಲಿ ಸೇರಿ ಪೂಜಾ ಕಾರ್ಯಕ್ರಮ ನಡೆಸಿದರು. ವಿಶೇಷ ಹೋಮ, ಅಭಿಷೇಕ, ಹಾಗೂ ಅರ್ಥಶಾಂತಿ ಯಾಗದ ಮೂಲಕ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿ ದೇಶದ ರಕ್ಷಣೆಗಾಗಿ ಶ್ರದ್ಧಾಪೂರ್ವಕವಾಗಿ ಹಾರೈಸಿದರು.
ಗ್ರಾಮದ ಹಿರಿಯರು, ಮಹಿಳೆಯರು, ಮಕ್ಕಳೂ ಸಹ ಭಾಗವಹಿಸಿದ್ದ ಈ ಪೂಜಾ ಕಾರ್ಯಕ್ರಮದಲ್ಲಿ ದೇಶಭಕ್ತಿಯ ಭಾವನೆ ಉಕ್ಕಿ ಹರಿದುಬಂದಿತು. “ಸೈನಿಕರ ಧೈರ್ಯವರ್ಧನೆಗೆ ಇದು ನಮ್ಮ ಕಡೆಯಿಂದ ಸಣ್ಣ ಕೊಡುಗೆ ಎಂದು ಗ್ರಾಮಸ್ಥರಾದ ನಾಗೇಶ್ ಗೌಡ ಹೇಳಿದರು.
ದೇಶಕ್ಕಾಗಿ ಹೋರಾಡುತ್ತಿರುವ ಯೋಧರಿಗೆ ಈ ಪ್ರಾರ್ಥನೆ ಶಕ್ತಿ ನೀಡಲಿ ಎಂಬದು ಎಲ್ಲರ ಆಶಯವಾಗಿದೆ.
ಇದೊಂದು ದೇಶಭಕ್ತಿಯ ನಿದರ್ಶನವಾಗಿದ್ದು, ಇಡೀ ಗ್ರಾಮದಲ್ಲಿ ದೇಶದ ಪರ ಭಕ್ತಿಯ ಚೈತನ್ಯ ಮೂಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು