8:07 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

Chikkamagaluru | ಯುದ್ಧ ಗೆದ್ದು ಬರಲಿ ಭಾರತ: ಕೊಟ್ಟಿಗೆಹಾರದ ಅತ್ತಿಗೆರೆ ಸೋಮೇಶ್ವರನಿಗೆ ವಿಶೇಷ ಪೂಜೆ

08/05/2025, 14:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಭಾರತ ಹಾಗೂ ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ, ಕೊಟ್ಟಿಗೆಹಾರ ಹತ್ತಿರದ ಅತ್ತಿಗೆರೆ ಗ್ರಾಮದಲ್ಲಿ ಭಾರತೀಯ ಸೇನೆಗೆ ಶಕ್ತಿ ಸಿಗಲೆಂದು ಹಾಗೂ ಭಾರತ ಯುದ್ಧದಲ್ಲಿ ಗೆಲುವು ಸಾಧಿಸಲೆಂದು ವಿಶೇಷ ಪೂಜೆ ನಡೆಸಲಾಯಿತು.
ಅತ್ತಿಗೆರೆ ಗ್ರಾಮದ ಪ್ರಸಿದ್ಧ ಸೋಮೇಶ್ವರ ದೇವಾಲಯದಲ್ಲಿ ಗ್ರಾಮಸ್ಥರು ಬೃಹತ್ ಸಂಖ್ಯೆಯಲ್ಲಿ ಸೇರಿ ಪೂಜಾ ಕಾರ್ಯಕ್ರಮ ನಡೆಸಿದರು. ವಿಶೇಷ ಹೋಮ, ಅಭಿಷೇಕ, ಹಾಗೂ ಅರ್ಥಶಾಂತಿ ಯಾಗದ ಮೂಲಕ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿ ದೇಶದ ರಕ್ಷಣೆಗಾಗಿ ಶ್ರದ್ಧಾಪೂರ್ವಕವಾಗಿ ಹಾರೈಸಿದರು.
ಗ್ರಾಮದ ಹಿರಿಯರು, ಮಹಿಳೆಯರು, ಮಕ್ಕಳೂ ಸಹ ಭಾಗವಹಿಸಿದ್ದ ಈ ಪೂಜಾ ಕಾರ್ಯಕ್ರಮದಲ್ಲಿ ದೇಶಭಕ್ತಿಯ ಭಾವನೆ ಉಕ್ಕಿ ಹರಿದುಬಂದಿತು. “ಸೈನಿಕರ ಧೈರ್ಯವರ್ಧನೆಗೆ ಇದು ನಮ್ಮ ಕಡೆಯಿಂದ ಸಣ್ಣ ಕೊಡುಗೆ ಎಂದು ಗ್ರಾಮಸ್ಥರಾದ ನಾಗೇಶ್ ಗೌಡ ಹೇಳಿದರು.
ದೇಶಕ್ಕಾಗಿ ಹೋರಾಡುತ್ತಿರುವ ಯೋಧರಿಗೆ ಈ ಪ್ರಾರ್ಥನೆ ಶಕ್ತಿ ನೀಡಲಿ ಎಂಬದು ಎಲ್ಲರ ಆಶಯವಾಗಿದೆ.
ಇದೊಂದು ದೇಶಭಕ್ತಿಯ ನಿದರ್ಶನವಾಗಿದ್ದು, ಇಡೀ ಗ್ರಾಮದಲ್ಲಿ ದೇಶದ ಪರ ಭಕ್ತಿಯ ಚೈತನ್ಯ ಮೂಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು