ಇತ್ತೀಚಿನ ಸುದ್ದಿ
Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ: ಮುಂದುವರಿದ ತೀವ್ರ ಶೋಧ
29/06/2025, 16:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಅರಣ್ಯದಲ್ಲಿ 3 ದಿನಗಳ ಹಿಂದೆ ನಾಪತ್ತೆಯಾಗಿರುವ ಫಾರೆಸ್ಡ್ ಗಾರ್ಡ್ ಅವರ ಶೋಧ ಕಾರ್ಯಾಚರಣೆ ಮುಂದುವರಿದೆ.
ಮೂಲತಃ ಮಡಿಕೇರಿಯವರಾದ ಶರತ್(33) ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ನೀಲಗಿರಿ ಪ್ಲಾಂಟೇಷನ್ ನಲ್ಲಿ ಅವರ ಬೈಕ್ ಮತ್ತು ಜರ್ಕಿನ್ ಪತ್ತೆಯಾಗಿದೆ.
ಶ್ವಾನ ದಳದ ನೆರವಿನೊಂದಿಗೆ ನಾಪತ್ತೆಯಾಗಿರೋ ಗಾರ್ಡ್ ಅವರ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು