3:18 PM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

Chikkamagaluru | ಬಂಪರ್ ಬೆಲೆಯ ನಡುವೆ ಮಂಗಗಳ ಕಾಟ: ಕಂಗಾಲಾದ ಕಾಫಿ ಬೆಳೆಗಾರರು

28/11/2025, 19:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಈ ಬಾರಿಯ ನಿರಂತರ ಮಳೆ ಮತ್ತು ಅವಧಿಗೂ ಮುನ್ನವೇ ಕಟಾವಿಗೆ ಬಂದಿರುವ ಕಾಫಿ ಹಣ್ಣುಗಳನ್ನು ಮಂಗಗಳು ನಾಶ ಮಾಡುತ್ತಿರುವುದರಿಂದ ಮಲೆನಾಡಿನ ಕಾಫಿ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.


ಒಂದೆಡೆ ಉತ್ತಮ ಬೆಲೆ ದೊರೆಯುತ್ತಿದ್ದರೂ, ಇಳುವರಿಯನ್ನು ಉಳಿಸಿಕೊಳ್ಳುವುದು ಬೆಳೆಗಾರರಿಗೆ ದೊಡ್ಡ ಸವಾಲಾಗಿದೆ. ಪ್ರಸಕ್ತ ವರ್ಷ ಮಲೆನಾಡು ಭಾಗದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಇದರ ಪರಿಣಾಮವಾಗಿ ಕಾಫಿ ಹಣ್ಣುಗಳು ಅವಧಿಗೂ ಮುನ್ನವೇ ಕೊಯ್ಲಿಗೆ ಬಂದಿವೆ. ಸರಿಯಾದ ಸಮಯಕ್ಕೆ ಕೊಯ್ಲು ಮಾಡದಿದ್ದರೆ ಕಾಫಿ ಹಣ್ಣುಗಳು ಉದುರಿ ಹೋಗುವ ಆತಂಕ ಬೆಳೆಗಾರರನ್ನು ಕಾಡುತ್ತಿದೆ. ಮತ್ತೊಂದೆಡೆ, ಕಾಫಿ ಕೊಯ್ಲು ಮಾಡಲು ಅಗತ್ಯವಿರುವ ಕಾರ್ಮಿಕರ ಕೊರತೆ ತೀವ್ರವಾಗಿದ್ದು, ಬೆಳೆಗಾರರು ಹೈರಾಣಾಗಿದ್ದಾರೆ. ಈ ಎಲ್ಲ ಸಮಸ್ಯೆಗಳ ನಡುವೆ, ತೋಟಗಳಲ್ಲಿ ಕಟಾವಿಗೆ ಬಂದಿರುವ ಕಾಫಿ ಹಣ್ಣುಗಳನ್ನು ಮಂಗಗಳು ಗುಂಪುಗುಂಪಾಗಿ ಬಂದು ತಿಂದು ನಾಶ ಮಾಡುತ್ತಿವೆ. ಮಲೆನಾಡಿನ ಬಹುತೇಕ ಕಾಫಿ ತೋಟಗಳಲ್ಲಿ ಇದೇ ಪರಿಸ್ಥಿತಿ ಕಂಡು ಬರುತ್ತಿದೆ. ಕೆಜಿಗಟ್ಟಲೆ ಕಾಫಿ ಹಣ್ಣುಗಳು ಪ್ರತಿದಿನ ಮಂಗಗಳ ಪಾಲಾಗುತ್ತಿದ್ದು, ಇಳುವರಿ ಭಾರೀ ಪ್ರಮಾಣದಲ್ಲಿ ಕುಸಿಯುವ ಭೀತಿ ಎದುರಾಗಿದೆ. ತಮ್ಮ ಬೆಳೆಗಳನ್ನು ರಕ್ಷಿಸಿಕೊಳ್ಳಲು ಕಾಫಿ ಬೆಳೆಗಾರರು ಶ್ರಮಿಸುತ್ತಿದ್ದಾರೆ. ಮಂಗಗಳನ್ನು ಓಡಿಸಲು ದಿನವಿಡೀ ಪಟಾಕಿಗಳನ್ನು ಸಿಡಿಸುವುದು, ತೋಟದ ಸುತ್ತ ಕಾವಲು ಕಾಯುವಂತಹ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಆದರೆ, ಮಂಗಗಳ ಸಂಖ್ಯೆ ಹೆಚ್ಚಿರುವುದರಿಂದ ಈ ಪ್ರಯತ್ನಗಳು ಅಷ್ಟಾಗಿ ಫಲ ನೀಡುತ್ತಿಲ್ಲ. ಒಂದೆಡೆ ಕಾಫಿಗೆ ಈ ಬಾರಿಯೂ ಬಂಪರ್ ಬೆಲೆ ದೊರೆಯುವ ನಿರೀಕ್ಷೆ ಇರುವುದರಿಂದ, ಕಷ್ಟಪಟ್ಟು ಬೆಳೆದ ಬೆಳೆಯನ್ನು ಮಂಗಗಳಿಗೆ ಆಹಾರವಾಗಲು ಬಿಡಲಾಗದೆ ಬೆಳೆಗಾರರು ಆರ್ಥಿಕ ನಷ್ಟದ ಜೊತೆಗೆ ಮಾನಸಿಕ ಒತ್ತಡವನ್ನೂ ಎದುರಿಸುವಂತಾಗಿದೆ.
ಕಾಫಿ ಬೆಳಗೆ ಉತ್ತಮ ಬೆಲೆ ಬಂದಿದ್ದು. ರೈತರು ಕಾಫಿ ಕೊಯ್ಲು ಶುರು ಮಾಡಿಕೊಂಡಿದ್ದರೆ ಮಲೆನಾಡಿನಲ್ಲಿ ಕೋತಿಗಳ ಕಾಟ ಅತಿಯಾಗಿದ್ದು ಬೆಳೆ ಉಳಿಸಿಕೊಳ್ಳುವುದೇ ದೊಡ್ಡ ಸಾಹಸವಾಗಿದೆ. ಕೋತಿಗಳು ಗುಂಪು ಗುಂಪಾಗಿ ಕಾಫಿ ತೋಟಗಳಿಗೆ ಲಗ್ಗೆ ಇಡುತ್ತಿದ್ದು ಕಾಫಿ ಬೆಳೆ ಉಳಿಸಿಕೊಳ್ಳುವುದು ಕಷ್ಟಕರವಾಗಿದೆ.
ಮಧು ಕುಮಾರ್. ಕಾಫಿತೋಟದ ಮಾಲೀಕರು
ಗ್ರಾಮ ಪಂಚಾಯತ್ ಸದಸ್ಯರು ಬಣಕಲ್

ಇತ್ತೀಚಿನ ಸುದ್ದಿ

ಜಾಹೀರಾತು