1:32 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Chikkamagaluru | ಬಂಪರ್ ಬೆಲೆಯ ನಡುವೆ ಮಂಗಗಳ ಕಾಟ: ಕಂಗಾಲಾದ ಕಾಫಿ ಬೆಳೆಗಾರರು

28/11/2025, 19:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಈ ಬಾರಿಯ ನಿರಂತರ ಮಳೆ ಮತ್ತು ಅವಧಿಗೂ ಮುನ್ನವೇ ಕಟಾವಿಗೆ ಬಂದಿರುವ ಕಾಫಿ ಹಣ್ಣುಗಳನ್ನು ಮಂಗಗಳು ನಾಶ ಮಾಡುತ್ತಿರುವುದರಿಂದ ಮಲೆನಾಡಿನ ಕಾಫಿ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.


ಒಂದೆಡೆ ಉತ್ತಮ ಬೆಲೆ ದೊರೆಯುತ್ತಿದ್ದರೂ, ಇಳುವರಿಯನ್ನು ಉಳಿಸಿಕೊಳ್ಳುವುದು ಬೆಳೆಗಾರರಿಗೆ ದೊಡ್ಡ ಸವಾಲಾಗಿದೆ. ಪ್ರಸಕ್ತ ವರ್ಷ ಮಲೆನಾಡು ಭಾಗದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಇದರ ಪರಿಣಾಮವಾಗಿ ಕಾಫಿ ಹಣ್ಣುಗಳು ಅವಧಿಗೂ ಮುನ್ನವೇ ಕೊಯ್ಲಿಗೆ ಬಂದಿವೆ. ಸರಿಯಾದ ಸಮಯಕ್ಕೆ ಕೊಯ್ಲು ಮಾಡದಿದ್ದರೆ ಕಾಫಿ ಹಣ್ಣುಗಳು ಉದುರಿ ಹೋಗುವ ಆತಂಕ ಬೆಳೆಗಾರರನ್ನು ಕಾಡುತ್ತಿದೆ. ಮತ್ತೊಂದೆಡೆ, ಕಾಫಿ ಕೊಯ್ಲು ಮಾಡಲು ಅಗತ್ಯವಿರುವ ಕಾರ್ಮಿಕರ ಕೊರತೆ ತೀವ್ರವಾಗಿದ್ದು, ಬೆಳೆಗಾರರು ಹೈರಾಣಾಗಿದ್ದಾರೆ. ಈ ಎಲ್ಲ ಸಮಸ್ಯೆಗಳ ನಡುವೆ, ತೋಟಗಳಲ್ಲಿ ಕಟಾವಿಗೆ ಬಂದಿರುವ ಕಾಫಿ ಹಣ್ಣುಗಳನ್ನು ಮಂಗಗಳು ಗುಂಪುಗುಂಪಾಗಿ ಬಂದು ತಿಂದು ನಾಶ ಮಾಡುತ್ತಿವೆ. ಮಲೆನಾಡಿನ ಬಹುತೇಕ ಕಾಫಿ ತೋಟಗಳಲ್ಲಿ ಇದೇ ಪರಿಸ್ಥಿತಿ ಕಂಡು ಬರುತ್ತಿದೆ. ಕೆಜಿಗಟ್ಟಲೆ ಕಾಫಿ ಹಣ್ಣುಗಳು ಪ್ರತಿದಿನ ಮಂಗಗಳ ಪಾಲಾಗುತ್ತಿದ್ದು, ಇಳುವರಿ ಭಾರೀ ಪ್ರಮಾಣದಲ್ಲಿ ಕುಸಿಯುವ ಭೀತಿ ಎದುರಾಗಿದೆ. ತಮ್ಮ ಬೆಳೆಗಳನ್ನು ರಕ್ಷಿಸಿಕೊಳ್ಳಲು ಕಾಫಿ ಬೆಳೆಗಾರರು ಶ್ರಮಿಸುತ್ತಿದ್ದಾರೆ. ಮಂಗಗಳನ್ನು ಓಡಿಸಲು ದಿನವಿಡೀ ಪಟಾಕಿಗಳನ್ನು ಸಿಡಿಸುವುದು, ತೋಟದ ಸುತ್ತ ಕಾವಲು ಕಾಯುವಂತಹ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಆದರೆ, ಮಂಗಗಳ ಸಂಖ್ಯೆ ಹೆಚ್ಚಿರುವುದರಿಂದ ಈ ಪ್ರಯತ್ನಗಳು ಅಷ್ಟಾಗಿ ಫಲ ನೀಡುತ್ತಿಲ್ಲ. ಒಂದೆಡೆ ಕಾಫಿಗೆ ಈ ಬಾರಿಯೂ ಬಂಪರ್ ಬೆಲೆ ದೊರೆಯುವ ನಿರೀಕ್ಷೆ ಇರುವುದರಿಂದ, ಕಷ್ಟಪಟ್ಟು ಬೆಳೆದ ಬೆಳೆಯನ್ನು ಮಂಗಗಳಿಗೆ ಆಹಾರವಾಗಲು ಬಿಡಲಾಗದೆ ಬೆಳೆಗಾರರು ಆರ್ಥಿಕ ನಷ್ಟದ ಜೊತೆಗೆ ಮಾನಸಿಕ ಒತ್ತಡವನ್ನೂ ಎದುರಿಸುವಂತಾಗಿದೆ.
ಕಾಫಿ ಬೆಳಗೆ ಉತ್ತಮ ಬೆಲೆ ಬಂದಿದ್ದು. ರೈತರು ಕಾಫಿ ಕೊಯ್ಲು ಶುರು ಮಾಡಿಕೊಂಡಿದ್ದರೆ ಮಲೆನಾಡಿನಲ್ಲಿ ಕೋತಿಗಳ ಕಾಟ ಅತಿಯಾಗಿದ್ದು ಬೆಳೆ ಉಳಿಸಿಕೊಳ್ಳುವುದೇ ದೊಡ್ಡ ಸಾಹಸವಾಗಿದೆ. ಕೋತಿಗಳು ಗುಂಪು ಗುಂಪಾಗಿ ಕಾಫಿ ತೋಟಗಳಿಗೆ ಲಗ್ಗೆ ಇಡುತ್ತಿದ್ದು ಕಾಫಿ ಬೆಳೆ ಉಳಿಸಿಕೊಳ್ಳುವುದು ಕಷ್ಟಕರವಾಗಿದೆ.
ಮಧು ಕುಮಾರ್. ಕಾಫಿತೋಟದ ಮಾಲೀಕರು
ಗ್ರಾಮ ಪಂಚಾಯತ್ ಸದಸ್ಯರು ಬಣಕಲ್

ಇತ್ತೀಚಿನ ಸುದ್ದಿ

ಜಾಹೀರಾತು