9:09 PM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

Chikkamagaluru | ಬಂಪರ್ ಬೆಲೆಯ ನಡುವೆ ಮಂಗಗಳ ಕಾಟ: ಕಂಗಾಲಾದ ಕಾಫಿ ಬೆಳೆಗಾರರು

28/11/2025, 19:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಈ ಬಾರಿಯ ನಿರಂತರ ಮಳೆ ಮತ್ತು ಅವಧಿಗೂ ಮುನ್ನವೇ ಕಟಾವಿಗೆ ಬಂದಿರುವ ಕಾಫಿ ಹಣ್ಣುಗಳನ್ನು ಮಂಗಗಳು ನಾಶ ಮಾಡುತ್ತಿರುವುದರಿಂದ ಮಲೆನಾಡಿನ ಕಾಫಿ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.


ಒಂದೆಡೆ ಉತ್ತಮ ಬೆಲೆ ದೊರೆಯುತ್ತಿದ್ದರೂ, ಇಳುವರಿಯನ್ನು ಉಳಿಸಿಕೊಳ್ಳುವುದು ಬೆಳೆಗಾರರಿಗೆ ದೊಡ್ಡ ಸವಾಲಾಗಿದೆ. ಪ್ರಸಕ್ತ ವರ್ಷ ಮಲೆನಾಡು ಭಾಗದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಇದರ ಪರಿಣಾಮವಾಗಿ ಕಾಫಿ ಹಣ್ಣುಗಳು ಅವಧಿಗೂ ಮುನ್ನವೇ ಕೊಯ್ಲಿಗೆ ಬಂದಿವೆ. ಸರಿಯಾದ ಸಮಯಕ್ಕೆ ಕೊಯ್ಲು ಮಾಡದಿದ್ದರೆ ಕಾಫಿ ಹಣ್ಣುಗಳು ಉದುರಿ ಹೋಗುವ ಆತಂಕ ಬೆಳೆಗಾರರನ್ನು ಕಾಡುತ್ತಿದೆ. ಮತ್ತೊಂದೆಡೆ, ಕಾಫಿ ಕೊಯ್ಲು ಮಾಡಲು ಅಗತ್ಯವಿರುವ ಕಾರ್ಮಿಕರ ಕೊರತೆ ತೀವ್ರವಾಗಿದ್ದು, ಬೆಳೆಗಾರರು ಹೈರಾಣಾಗಿದ್ದಾರೆ. ಈ ಎಲ್ಲ ಸಮಸ್ಯೆಗಳ ನಡುವೆ, ತೋಟಗಳಲ್ಲಿ ಕಟಾವಿಗೆ ಬಂದಿರುವ ಕಾಫಿ ಹಣ್ಣುಗಳನ್ನು ಮಂಗಗಳು ಗುಂಪುಗುಂಪಾಗಿ ಬಂದು ತಿಂದು ನಾಶ ಮಾಡುತ್ತಿವೆ. ಮಲೆನಾಡಿನ ಬಹುತೇಕ ಕಾಫಿ ತೋಟಗಳಲ್ಲಿ ಇದೇ ಪರಿಸ್ಥಿತಿ ಕಂಡು ಬರುತ್ತಿದೆ. ಕೆಜಿಗಟ್ಟಲೆ ಕಾಫಿ ಹಣ್ಣುಗಳು ಪ್ರತಿದಿನ ಮಂಗಗಳ ಪಾಲಾಗುತ್ತಿದ್ದು, ಇಳುವರಿ ಭಾರೀ ಪ್ರಮಾಣದಲ್ಲಿ ಕುಸಿಯುವ ಭೀತಿ ಎದುರಾಗಿದೆ. ತಮ್ಮ ಬೆಳೆಗಳನ್ನು ರಕ್ಷಿಸಿಕೊಳ್ಳಲು ಕಾಫಿ ಬೆಳೆಗಾರರು ಶ್ರಮಿಸುತ್ತಿದ್ದಾರೆ. ಮಂಗಗಳನ್ನು ಓಡಿಸಲು ದಿನವಿಡೀ ಪಟಾಕಿಗಳನ್ನು ಸಿಡಿಸುವುದು, ತೋಟದ ಸುತ್ತ ಕಾವಲು ಕಾಯುವಂತಹ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಆದರೆ, ಮಂಗಗಳ ಸಂಖ್ಯೆ ಹೆಚ್ಚಿರುವುದರಿಂದ ಈ ಪ್ರಯತ್ನಗಳು ಅಷ್ಟಾಗಿ ಫಲ ನೀಡುತ್ತಿಲ್ಲ. ಒಂದೆಡೆ ಕಾಫಿಗೆ ಈ ಬಾರಿಯೂ ಬಂಪರ್ ಬೆಲೆ ದೊರೆಯುವ ನಿರೀಕ್ಷೆ ಇರುವುದರಿಂದ, ಕಷ್ಟಪಟ್ಟು ಬೆಳೆದ ಬೆಳೆಯನ್ನು ಮಂಗಗಳಿಗೆ ಆಹಾರವಾಗಲು ಬಿಡಲಾಗದೆ ಬೆಳೆಗಾರರು ಆರ್ಥಿಕ ನಷ್ಟದ ಜೊತೆಗೆ ಮಾನಸಿಕ ಒತ್ತಡವನ್ನೂ ಎದುರಿಸುವಂತಾಗಿದೆ.
ಕಾಫಿ ಬೆಳಗೆ ಉತ್ತಮ ಬೆಲೆ ಬಂದಿದ್ದು. ರೈತರು ಕಾಫಿ ಕೊಯ್ಲು ಶುರು ಮಾಡಿಕೊಂಡಿದ್ದರೆ ಮಲೆನಾಡಿನಲ್ಲಿ ಕೋತಿಗಳ ಕಾಟ ಅತಿಯಾಗಿದ್ದು ಬೆಳೆ ಉಳಿಸಿಕೊಳ್ಳುವುದೇ ದೊಡ್ಡ ಸಾಹಸವಾಗಿದೆ. ಕೋತಿಗಳು ಗುಂಪು ಗುಂಪಾಗಿ ಕಾಫಿ ತೋಟಗಳಿಗೆ ಲಗ್ಗೆ ಇಡುತ್ತಿದ್ದು ಕಾಫಿ ಬೆಳೆ ಉಳಿಸಿಕೊಳ್ಳುವುದು ಕಷ್ಟಕರವಾಗಿದೆ.
ಮಧು ಕುಮಾರ್. ಕಾಫಿತೋಟದ ಮಾಲೀಕರು
ಗ್ರಾಮ ಪಂಚಾಯತ್ ಸದಸ್ಯರು ಬಣಕಲ್

ಇತ್ತೀಚಿನ ಸುದ್ದಿ

ಜಾಹೀರಾತು