1:53 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು

15/07/2025, 19:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿದ್ಯುತ್ ತಂತಿ ಸ್ವರ್ಶಿಸಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರಾಪುರ ಗ್ರಾಮದಲ್ಲಿ ನಡೆದಿದೆ.
ಬೈರಾಪುರ ಗ್ರಾಮದ ಕೃಷಿಕರಾದ ನಾಗೇಶ್ ಗೌಡ (72) ಆಕಸ್ಮಿಕ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ.
ನಾಗೇಶ್ ಗೌಡ ಅವರು ಮಂಗಳವಾರ ಮಧ್ಯಾಹ್ನ ತಮ್ಮ ಜಾನುವಾರುಗಳನ್ನು ಮೇಯಿಸಲು ತೆರಳಿದ್ದ ವೇಳೆ ಬೈರಾಪುರ ಸರ್ಕಾರಿ ಶಾಲೆಯ ಸಮೀಪ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. 11 ಕೆಂ.ವಿ. ವಿದ್ಯುತ್ ಪವರ್ ಲೈನ್ ಕಂಬದ ಬಳಿ ವಿದ್ಯುತ್ ಗ್ರೌಂಡ್ ಆಗಿದ್ದು ಘಟನೆಗೆ ಕಾರಣ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಆ ಸ್ಥಳದಲ್ಲಿ ಜಾನುವಾರುಗಳನ್ನು ಮೇಯಿಸಲು ಹೋದಾಗ ನಾಗೇಶ್ ಗೌಡರಿಗೆ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕು.
ನಾಗೇಶ್ ಗೌಡ ಅವರು ಗ್ರಾಮದ ಹಿರಿಯ ಕೃಷಿಕರಾಗಿದ್ದರು. ಅವರು ಪತ್ನಿ ಹಾಗೂ ಇಬ್ಬರು ಪುತ್ರರು ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ.
ಸ್ಥಳಕ್ಕೆ ಗೋಣಿಬೀಡು ಪೊಲೀಸರು ಮತ್ತು ಮೆಸ್ಕಾಂ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ಕೊಂಡೊಯ್ಯಲಾಗುತ್ತದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು