9:38 PM Wednesday6 - August 2025
ಬ್ರೇಕಿಂಗ್ ನ್ಯೂಸ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:…

ಇತ್ತೀಚಿನ ಸುದ್ದಿ

Chikkamagaluru | ಮೂಡಿಗೆರೆ: ಮುತ್ತಿಗೆಪುರ ಗ್ರಾಮದಲ್ಲಿ ಕಾಡಾನೆ ದಾಳಿ; ಓರ್ವ ಗಂಭೀರ ಗಾಯ

06/08/2025, 19:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಪಟ್ಟಣ ಸಮೀಪದ ಮುತ್ತಿಗೆಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಕಾಡಾನೆ ದಾಳಿಯಲ್ಲಿ ಸ್ಥಳೀಯ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯಗಳಾಗಿವೆ.
63 ವರ್ಷದ ಫಿಲಿಪ್ ಎಂಬ ವ್ಯಕ್ತಿ ಕಾಡಾನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದಾರೆ. ಮಧ್ಯ ರಾತ್ರಿ ವೇಳೆ ಮನೆಯ ಸಮೀಪ ನಾಯಿ ಬೊಗಳಿದಾಗ ಮನೆ ಸಮೀಪ ಏನೋ ಶಬ್ದವಾಗುತ್ತಿರುವುದನ್ನು ಗಮನಿಸಿ ಜಾನುವಾರುಗಳು ಬಂದಿರಬಹುದು ಎಂದು ಮನೆಯ ಹೊರಗೆ ಬಂದಿದ್ದಾರೆ.  ಮನೆಯಿಂದ ಹೊರಬಂದ ವೇಳೆ  ಮನೆಯ ಸಮೀಪವೆ ಬಂದಿದ್ದ ಕಾಡಾನೆ ಏಕಾಏಕಿ ಫಿಲಿಪ್ ಅವರ ಮೇಲೆ ದಾಳಿ ನಡೆಸಿದೆ. ಕಾಡಾನೆ ಸೊಂಡಿಲಿನಿಂದ ಫಿಲಿಪ್ ಅವರನ್ನು ತೆಗೆದು ಎಸೆದಿದೆ. ಆನೆ ದಾಳಿಯಿಂದ ಕಾಲು, ಎದೆ ಹಾಗೂ ಕೈಭಾಗಕ್ಕೆ ತೀವ್ರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಫಿಲಿಪ್ ಕ್ಯಾಸ್ಟೋಲಿನಾ ಅವರು ಮುತ್ತಿಗೆಪುರ ನಿವಾಸಿಯಾಗಿದ್ದು, ಟ್ರಾಕ್ಟರ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದಾರೆ. ತನ್ನ ಪತ್ನಿ ಹಾಗೂ ಮಗನೊಂದಿಗೆ ವಾಸವಾಗಿದ್ದಾರೆ. ಇದೀಗ ಅವರು ತೀವ್ರ ಗಾಯಗೊಂಡಿದ್ದು ಮುಂದಿನ ದಿನಗಳಲ್ಲಿ ದುಡಿದು ತಿನ್ನುವುದಕ್ಕೆ ಕಷ್ಟವಾಗಿದೆ. ಆನೆ ದಾಳಿಯಿಂದ ಅವರ ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿದೆ.
ಗ್ರಾಮದ ಕಾಫಿ ತೋಟಗಳಲ್ಲಿ ಕಳೆದ ಕೆಲವು ವಾರಗಳಿಂದ ಸುಮಾರು 35 ಕಾಡಾನೆಗಳು ವಾಸ್ತವ್ಯ ಹೂಡಿದ್ದು, ಅವು ನಿರಂತರವಾಗಿ ವಸತಿ ಪ್ರದೇಶಗಳಿಗೆ ನುಗ್ಗುತ್ತಿರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ತಾಲ್ಲೂಕಿನ ಮಾಕೋನಹಳ್ಳಿ, ಕಾರಬೈಲ್, ದುಂಡುಗ, ಹಳಸೆ, ಮುತ್ತಿಗೆಪುರ ಗ್ರಾಮಗಳ ಸುತ್ತಾ ಸಂಚರಿಸುತ್ತಾ ತೀವ್ರ ಉಪಟಳ ನೀಡುತ್ತಿವೆ. ಜನರ ನೋವುಗಳನ್ನು ಕೇಳುವವರು ಇಲ್ಲದಾಗಿದೆ.
ಘಟನೆ ತಿಳಿಯುತ್ತಿದ್ದಂತೆಯೇ, ಮಧ್ಯರಾತ್ರಿ ಹೊತ್ತಿಗೆ ಮೂಡಿಗೆರೆ ಅರಣ್ಯ ಅಧಿಕಾರಿ ಕಾವ್ಯ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಪ್ರಸ್ತುತ ಕಾಡಾನೆಗಳು ಕುನ್ನಹಳ್ಳಿ ಹಳಸೆ ಭಾಗದಲ್ಲಿ ಬೀಡುಬಿಟ್ಟಿದ್ದು, ಕಾಫಿ ತೋಟ, ಶುಂಠಿ ಗದ್ದೆಗಳಿಗೆ ಲಗ್ಗೆ ಇಟ್ಟಿವೆ. ಕುನ್ನಹಳ್ಳಿ ಚಂದ್ರಶೇಖರ್ ಎಂಬುವವರ ಗದ್ದೆಯಲ್ಲಿ ನಾಟಿ ಮಾಡಿದ್ದ ಶುಂಠಿ ಬೆಳೆಯನ್ನು ಸಂಪೂರ್ಣ ತುಳಿದು ನಾಶಮಾಡಿವೆ.

ಇತ್ತೀಚಿನ ಸುದ್ದಿ

ಜಾಹೀರಾತು