10:03 PM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

Chikkamagaluru | ಮೂಡಿಗೆರೆ: ಮುತ್ತಿಗೆಪುರ ಗ್ರಾಮದಲ್ಲಿ ಕಾಡಾನೆ ದಾಳಿ; ಓರ್ವ ಗಂಭೀರ ಗಾಯ

06/08/2025, 19:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಪಟ್ಟಣ ಸಮೀಪದ ಮುತ್ತಿಗೆಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಕಾಡಾನೆ ದಾಳಿಯಲ್ಲಿ ಸ್ಥಳೀಯ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯಗಳಾಗಿವೆ.
63 ವರ್ಷದ ಫಿಲಿಪ್ ಎಂಬ ವ್ಯಕ್ತಿ ಕಾಡಾನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದಾರೆ. ಮಧ್ಯ ರಾತ್ರಿ ವೇಳೆ ಮನೆಯ ಸಮೀಪ ನಾಯಿ ಬೊಗಳಿದಾಗ ಮನೆ ಸಮೀಪ ಏನೋ ಶಬ್ದವಾಗುತ್ತಿರುವುದನ್ನು ಗಮನಿಸಿ ಜಾನುವಾರುಗಳು ಬಂದಿರಬಹುದು ಎಂದು ಮನೆಯ ಹೊರಗೆ ಬಂದಿದ್ದಾರೆ.  ಮನೆಯಿಂದ ಹೊರಬಂದ ವೇಳೆ  ಮನೆಯ ಸಮೀಪವೆ ಬಂದಿದ್ದ ಕಾಡಾನೆ ಏಕಾಏಕಿ ಫಿಲಿಪ್ ಅವರ ಮೇಲೆ ದಾಳಿ ನಡೆಸಿದೆ. ಕಾಡಾನೆ ಸೊಂಡಿಲಿನಿಂದ ಫಿಲಿಪ್ ಅವರನ್ನು ತೆಗೆದು ಎಸೆದಿದೆ. ಆನೆ ದಾಳಿಯಿಂದ ಕಾಲು, ಎದೆ ಹಾಗೂ ಕೈಭಾಗಕ್ಕೆ ತೀವ್ರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಫಿಲಿಪ್ ಕ್ಯಾಸ್ಟೋಲಿನಾ ಅವರು ಮುತ್ತಿಗೆಪುರ ನಿವಾಸಿಯಾಗಿದ್ದು, ಟ್ರಾಕ್ಟರ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದಾರೆ. ತನ್ನ ಪತ್ನಿ ಹಾಗೂ ಮಗನೊಂದಿಗೆ ವಾಸವಾಗಿದ್ದಾರೆ. ಇದೀಗ ಅವರು ತೀವ್ರ ಗಾಯಗೊಂಡಿದ್ದು ಮುಂದಿನ ದಿನಗಳಲ್ಲಿ ದುಡಿದು ತಿನ್ನುವುದಕ್ಕೆ ಕಷ್ಟವಾಗಿದೆ. ಆನೆ ದಾಳಿಯಿಂದ ಅವರ ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿದೆ.
ಗ್ರಾಮದ ಕಾಫಿ ತೋಟಗಳಲ್ಲಿ ಕಳೆದ ಕೆಲವು ವಾರಗಳಿಂದ ಸುಮಾರು 35 ಕಾಡಾನೆಗಳು ವಾಸ್ತವ್ಯ ಹೂಡಿದ್ದು, ಅವು ನಿರಂತರವಾಗಿ ವಸತಿ ಪ್ರದೇಶಗಳಿಗೆ ನುಗ್ಗುತ್ತಿರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ತಾಲ್ಲೂಕಿನ ಮಾಕೋನಹಳ್ಳಿ, ಕಾರಬೈಲ್, ದುಂಡುಗ, ಹಳಸೆ, ಮುತ್ತಿಗೆಪುರ ಗ್ರಾಮಗಳ ಸುತ್ತಾ ಸಂಚರಿಸುತ್ತಾ ತೀವ್ರ ಉಪಟಳ ನೀಡುತ್ತಿವೆ. ಜನರ ನೋವುಗಳನ್ನು ಕೇಳುವವರು ಇಲ್ಲದಾಗಿದೆ.
ಘಟನೆ ತಿಳಿಯುತ್ತಿದ್ದಂತೆಯೇ, ಮಧ್ಯರಾತ್ರಿ ಹೊತ್ತಿಗೆ ಮೂಡಿಗೆರೆ ಅರಣ್ಯ ಅಧಿಕಾರಿ ಕಾವ್ಯ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಪ್ರಸ್ತುತ ಕಾಡಾನೆಗಳು ಕುನ್ನಹಳ್ಳಿ ಹಳಸೆ ಭಾಗದಲ್ಲಿ ಬೀಡುಬಿಟ್ಟಿದ್ದು, ಕಾಫಿ ತೋಟ, ಶುಂಠಿ ಗದ್ದೆಗಳಿಗೆ ಲಗ್ಗೆ ಇಟ್ಟಿವೆ. ಕುನ್ನಹಳ್ಳಿ ಚಂದ್ರಶೇಖರ್ ಎಂಬುವವರ ಗದ್ದೆಯಲ್ಲಿ ನಾಟಿ ಮಾಡಿದ್ದ ಶುಂಠಿ ಬೆಳೆಯನ್ನು ಸಂಪೂರ್ಣ ತುಳಿದು ನಾಶಮಾಡಿವೆ.

ಇತ್ತೀಚಿನ ಸುದ್ದಿ

ಜಾಹೀರಾತು