10:02 PM Monday25 - May 2026
ಬ್ರೇಕಿಂಗ್ ನ್ಯೂಸ್
ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:…

ಇತ್ತೀಚಿನ ಸುದ್ದಿ

Chikkamagaluru | ವಿವಿಧ ಚರ್ಚುಗಳಲ್ಲಿ ಮಾತೆ ಮರಿಯಮ್ಮನವರ ಹಬ್ಬಕ್ಕೆ ನೋವೆನಾ ಪ್ರಾರ್ಥನೆ

04/09/2025, 12:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸೆಪ್ಟೆಂಬರ್ 8ರಂದು ನಡೆಯಲಿರುವ ಮಾತೆ ಮರಿಯಮ್ಮನವರ ಹಬ್ಬ(ಹೊಸಕ್ಕಿ ಹಬ್ಬ)ಕ್ಕೆ ಮೂಡಿಗೆರೆ ತಾಲ್ಲೂಕಿನಾದ್ಯಂತ ವಿವಿಧ ಚರ್ಚುಗಳು ಒಂಬತ್ತು ದಿನಗಳ ನೊವೇನಾ ಪ್ರಾರ್ಥನೆ ಆರಂಭವಾಗಿದೆ. ಮೂಡಿಗೆರೆ ಸಂತ ಅಂತೋಣಿ ಚರ್ಚ್ ಸೇರಿದಂತೆ ಗೋಣಿಬೀಡಿನ ಕಸ್ಕೇಬೈಲ್,ಬಸ್ಕಲ್,ಬಣಕಲ್,ಕೊಟ್ಟಿಗೆಹಾರ,ಬಾಳೂರು,ಜಾವಳಿ,ಕೆಳಗೂರು, ಹಿರೇಬೈಲ್, ಕೂವೆ ಸೇರಿದಂತೆ ಹಲವೆಡೆ ಬಾಲಿಕ ಮರಿಯ ಪ್ರತಿಮೆಗೆ ಹೂ ಅರ್ಪಣೆ ಮಾಡಿ ವಿಶೇಷ ಪ್ರಾರ್ಥನೆ ಮಾಡುವ ಮೂಲಕ ಶೃದ್ಧಾಭಕ್ತಿ ಅರ್ಪಿಸಲಾಗುತ್ತಿದೆ.ಆಗಸ್ಟ್ 30ರಿಂದಲೇ ಒಂಬತ್ತು ದಿನಗಳ ಕಾಲ ಮರಿಯಮ್ಮನವರ ಜಯಂತಿ ಅಂಗವಾಗಿ ಈ ವಿಶೇಷ ನೊವೇನಾ ಆರಂಭಿಸಲಾಗಿದ್ದು ಹಬ್ಬದ ಪರವಾಗಿ ರಸಪ್ರಶ್ನೆಗಳು ಸೇರಿದಂತೆ ವಿವಿಧ ಸ್ಪರ್ಧೆ ಏರ್ಪಡಿಸಿ ಹಬ್ಬದಂದು ಬಹುಮಾನ ನೀಡಲಾಗುತ್ತದೆ ಎಂದು ಕೊಟ್ಟಿಗೆಹಾರ ಸೆಕ್ರೆಡ್ ಹಾರ್ಟ್ ಚರ್ಚಿನ ಧರ್ಮಗುರು ರೆ.ಫಾ.ವಿಲಿಯಂ ಬರ್ನಾರ್ಡ್ ತಿಳಿಸಿದ್ದಾರೆ.
ವಿವಿಧ ಚರ್ಚುಗಳಲ್ಲಿ ಮಕ್ಕಳು ಸೇರಿದಂತೆ ಕ್ರೈಸ್ತ ಭಕ್ತಾದಿಗಳು ಹೆಚ್ಚಾಗಿ ಸಮಾವೇಶಗೊಂಡು ತಟ್ಟೆಯಲ್ಲಿ ವಿವಿಧ ಹೂಗಳನ್ನು ತಂದು ಬಾಲಿಕ ಮರಿಯಗೆ ಅರ್ಪಿಸಿ ನೋವೆನಾ ಪ್ರಾರ್ಥನೆಯಲ್ಲಿ ಭಾಗವಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು