9:06 PM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

Chikkamagaluru | ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ನಲ್ಲಿ ಪೊಲೀಸ್ ಬಿಗಿ ಭದ್ರತೆ: ಕಟ್ಟುನಿಟ್ಟಿನ ವಾಹನ ತಪಾಸಣೆ

03/05/2025, 21:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ(reporterkarnataka.com): ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮರ್ಡರ್‌ನ ನಂತರ ರಾಜ್ಯದಲ್ಲಿ ಭದ್ರತಾ ಕ್ರಮಗಳು ತೀವ್ರಗೊಂಡಿದ್ದು, ಚಿಕ್ಕಮಗಳೂರು ಗಡಿಭಾಗವಾದ ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ನಲ್ಲಿ ಕಟ್ಟುನಿಟ್ಟಿನ ಪೊಲೀಸ್ ಭದ್ರತೆ ಜಾರಿಯಲ್ಲಿದೆ.
ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಗಡಿಭಾಗದ ಪ್ರಮುಖ ಪ್ರವೇಶ ಬಾಗಿಲಾದ ಕೊಟ್ಟಿಗೆಹಾರದಲ್ಲಿ ಇದೀಗ ಪ್ರತಿಯೊಂದು ವಾಹನದ ತಪಾಸಣೆ ನಡೆಸಲಾಗುತ್ತಿದೆ. ಗಸ್ತು ಕಾರ್ಯಾಚರಣೆ ಹೆಚ್ಚಳಗೊಂಡಿದ್ದು, ಶಂಕಿತ ವಾಹನಗಳು ಹಾಗೂ ವ್ಯಕ್ತಿಗಳ ಮೇಲೆ ನಿಗಾ ವಹಿಸಲಾಗುತ್ತಿದೆ.

ಬಣಕಲ್ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರೇಣುಕಾ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ತಪಾಸಣಾ ಚಟುವಟಿಕೆ ಗಡಿಭಾಗದ ಶಾಂತಿಯುತ ಪರಿಸರವನ್ನು ಕಾಪಾಡಲು ಉದ್ದೇಶಿತವಾಗಿದೆ. “ನಮ್ಮ ಗಡಿಭಾಗವು ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಮಾದರಿ ಆಗಬೇಕು. ಯಾವುದೇ ಬಾಹ್ಯ ಅಶಾಂತಿ ಜಿಲ್ಲೆಗೆ ಪ್ರವೇಶಿಸದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ,” ಎಂದು ಅವರು ತಿಳಿಸಿದ್ದಾರೆ.
ಈ ಕ್ರಮದ ಭಾಗವಾಗಿ ಸಾರ್ವಜನಿಕರನ್ನು ಸಹ ಸಹಕಾರ ನೀಡುವಂತೆ ಪೊಲೀಸರು ವಿನಂತಿಸಿದ್ದಾರೆ. ಜಿಲ್ಲೆಯ ಶಾಂತಿಯನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು