5:58 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Chikkamagaluru | ಜಯಪುರ ಸಾರ್ವಜನಿಕ ಆಸ್ಪತ್ರೆ ತಕ್ಷಣ ಉದ್ಘಾಟನೆಗೆ ಒತ್ತಾಯಿಸಿ ಪ್ರತಿಭಟನೆ

17/09/2025, 20:47

ಶಶಿ ಬೆತ್ತದಕೊಳಲು ಚಿಕ್ಕಮಗಳೂರು

info.reporterkarnataka@gmail.com

ಜಯಪುರದ ಸಾರ್ವಜನಿಕ ಆಸ್ಪತ್ರೆಯನ್ನು ಹದಿನೈದು ದಿನಗಳೊಳಗೆ ಉದ್ಘಾಟನೆ ಮಾಡಿ ಸಾರ್ವಜನಿಕ ಸೇವೆಗೆ ಅನುಕೂಲ ಮಾಡಬೇಕು ಎಂದು ಜಯಪುರದಲ್ಲಿ ಸಾರ್ವಜನಿಕ ಆಸ್ಪತ್ರೆಯನ್ನು ಕೂಡಲೇ ಉದ್ಘಾಟಿಸುವಂತೆ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ದಿಶಾ ಸಮಿತಿ ಸದಸ್ಯರಾದ ಮಣಿಕಂಠನ್ ಕಂದಸ್ವಾಮಿ ಆಗ್ರಹಿಸಿದರು.
ಕಳೆದ ಸರ್ಕಾರದ ಅವಧಿಯಲ್ಲಿ ಆರಂಭವಾದ ಜಯಪುರ ಸಾರ್ವಜನಿಕ ಆಸ್ಪತ್ರೆ ಕಾಮಗಾರಿ ಮುಗಿದು ಅನೇಕ ತಿಂಗಳುಗಳಾದರೂ ಇನ್ನೂ ಉದ್ಘಾಟನೆ ಆಗದೆ ಸಾರ್ವಜನಿಕ ಸೇವೆ ಲಭ್ಯವಿಲ್ಲದೆ ಸುಮಾರು 20 ಕಿಮೀ ವ್ಯಾಪ್ತಿಯ ಜನತೆ ತುರ್ತು ಆರೋಗ್ಯ ಸೌಲಭ್ಯ ಸಿಗದೆ ಪರಿತಪ್ಪಿಸುವಂತಾಗಿದೆ. ಕಳೆದ ಬಾರಿ ಪ್ರತಿಭಟನೆ ಮಾಡಿದಾಗ ಉದ್ಘಾಟನೆಗೆ ಒತ್ತಾಯಿಸಿದಾಗ ಉದ್ಘಾಟನೆಗೆ ದಿನಾಂಕ ಗೊತ್ತುಪಡಿಸಿ ನಂತರ ಮುಂದೂಡಿ ಇನ್ನೂ ಉದ್ಘಾಟನೆ ಬಗ್ಗೆ ಯಾವುದೇ ಪ್ರಗತಿ ಇಲ್ಲದೆ ಇರುವುದು ಹಲವು ಸಂಶಯವನ್ನು ಮೂಡಿಸುತ್ತಿದೆ.
ಉದ್ಘಾಟನೆ ದಿನಾಂಕ ನಿಗದಿ ಪಡಿಸುವ ವರೆಗೆ ಪ್ರತಿಭಟನೆಯನ್ನು ಕೈ ಬಿಡುವುದಿಲ್ಲ ಎಂದರೂ ಕೊನೆಗೆ ವೈಧ್ಯಾಧಿಕಾರಿ ಸುಧೀಂದ್ರ ದೂರವಾಣಿ ಮೂಲಕ ಡಿ ಎಚ್ ಓ ಗೆ ಮಾತನಾಡಿ ಹದಿನೈದು ದಿನದೊಳಗೆ ಉದ್ಘಾಟನೆ ಮಾಡಿ ಸಾರ್ವಜನಿಕ ಸೇವೆಯನ್ನು ಪ್ರಾರಂಭಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜಯಪುರ ಗ್ರಾಮ ಪಂಚಾಯತಿ ಅಧ್ಯಕ್ಷ ಕರುಣಾಕರ , ಉಪಾಧ್ಯಕ್ಷೆ ಜಯ ಮುರುಗೇಶ್ , ಬಿಜೆಪಿ ಮೇಗುಂದಾ ಹೋಬಳಿ ಅಧ್ಯಕ್ಷ ಕಾರ್ತಿಕ್ , ಪ್ರಧಾನ ಕಾರ್ಯದರ್ಶಿ ಹಾಲಪ್ಪ , ಪಂಚಾಯತಿ ಸದಸ್ಯರಾದ ಸಂಪತ್ , ವೆಂಕಟೇಶ್ , ಪ್ರವೀಣ್ , ರಮ್ಯ , ನಳಿನಿ , ಶ್ರೀನಿವಾಸ , ಶಕುಂತಲಾ ಮುಖಂಡರಾದ ಧರ್ಮರಾಜ್ , ಮಂಜು ಅಣ್ಣು , ಕುಮಾರ್, ಸುಧೀಂದ್ರ, ಯುವಮೋರ್ಚಾ ಅಧ್ಯಕ್ಷ ಸಂದೇಶ್ ಹಾಗೂ ಅನೇಕರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು