4:17 AM Sunday19 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

Chikkamagaluru | ಜಯಪುರ ಸಾರ್ವಜನಿಕ ಆಸ್ಪತ್ರೆ ತಕ್ಷಣ ಉದ್ಘಾಟನೆಗೆ ಒತ್ತಾಯಿಸಿ ಪ್ರತಿಭಟನೆ

17/09/2025, 20:47

ಶಶಿ ಬೆತ್ತದಕೊಳಲು ಚಿಕ್ಕಮಗಳೂರು

info.reporterkarnataka@gmail.com

ಜಯಪುರದ ಸಾರ್ವಜನಿಕ ಆಸ್ಪತ್ರೆಯನ್ನು ಹದಿನೈದು ದಿನಗಳೊಳಗೆ ಉದ್ಘಾಟನೆ ಮಾಡಿ ಸಾರ್ವಜನಿಕ ಸೇವೆಗೆ ಅನುಕೂಲ ಮಾಡಬೇಕು ಎಂದು ಜಯಪುರದಲ್ಲಿ ಸಾರ್ವಜನಿಕ ಆಸ್ಪತ್ರೆಯನ್ನು ಕೂಡಲೇ ಉದ್ಘಾಟಿಸುವಂತೆ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ದಿಶಾ ಸಮಿತಿ ಸದಸ್ಯರಾದ ಮಣಿಕಂಠನ್ ಕಂದಸ್ವಾಮಿ ಆಗ್ರಹಿಸಿದರು.
ಕಳೆದ ಸರ್ಕಾರದ ಅವಧಿಯಲ್ಲಿ ಆರಂಭವಾದ ಜಯಪುರ ಸಾರ್ವಜನಿಕ ಆಸ್ಪತ್ರೆ ಕಾಮಗಾರಿ ಮುಗಿದು ಅನೇಕ ತಿಂಗಳುಗಳಾದರೂ ಇನ್ನೂ ಉದ್ಘಾಟನೆ ಆಗದೆ ಸಾರ್ವಜನಿಕ ಸೇವೆ ಲಭ್ಯವಿಲ್ಲದೆ ಸುಮಾರು 20 ಕಿಮೀ ವ್ಯಾಪ್ತಿಯ ಜನತೆ ತುರ್ತು ಆರೋಗ್ಯ ಸೌಲಭ್ಯ ಸಿಗದೆ ಪರಿತಪ್ಪಿಸುವಂತಾಗಿದೆ. ಕಳೆದ ಬಾರಿ ಪ್ರತಿಭಟನೆ ಮಾಡಿದಾಗ ಉದ್ಘಾಟನೆಗೆ ಒತ್ತಾಯಿಸಿದಾಗ ಉದ್ಘಾಟನೆಗೆ ದಿನಾಂಕ ಗೊತ್ತುಪಡಿಸಿ ನಂತರ ಮುಂದೂಡಿ ಇನ್ನೂ ಉದ್ಘಾಟನೆ ಬಗ್ಗೆ ಯಾವುದೇ ಪ್ರಗತಿ ಇಲ್ಲದೆ ಇರುವುದು ಹಲವು ಸಂಶಯವನ್ನು ಮೂಡಿಸುತ್ತಿದೆ.
ಉದ್ಘಾಟನೆ ದಿನಾಂಕ ನಿಗದಿ ಪಡಿಸುವ ವರೆಗೆ ಪ್ರತಿಭಟನೆಯನ್ನು ಕೈ ಬಿಡುವುದಿಲ್ಲ ಎಂದರೂ ಕೊನೆಗೆ ವೈಧ್ಯಾಧಿಕಾರಿ ಸುಧೀಂದ್ರ ದೂರವಾಣಿ ಮೂಲಕ ಡಿ ಎಚ್ ಓ ಗೆ ಮಾತನಾಡಿ ಹದಿನೈದು ದಿನದೊಳಗೆ ಉದ್ಘಾಟನೆ ಮಾಡಿ ಸಾರ್ವಜನಿಕ ಸೇವೆಯನ್ನು ಪ್ರಾರಂಭಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜಯಪುರ ಗ್ರಾಮ ಪಂಚಾಯತಿ ಅಧ್ಯಕ್ಷ ಕರುಣಾಕರ , ಉಪಾಧ್ಯಕ್ಷೆ ಜಯ ಮುರುಗೇಶ್ , ಬಿಜೆಪಿ ಮೇಗುಂದಾ ಹೋಬಳಿ ಅಧ್ಯಕ್ಷ ಕಾರ್ತಿಕ್ , ಪ್ರಧಾನ ಕಾರ್ಯದರ್ಶಿ ಹಾಲಪ್ಪ , ಪಂಚಾಯತಿ ಸದಸ್ಯರಾದ ಸಂಪತ್ , ವೆಂಕಟೇಶ್ , ಪ್ರವೀಣ್ , ರಮ್ಯ , ನಳಿನಿ , ಶ್ರೀನಿವಾಸ , ಶಕುಂತಲಾ ಮುಖಂಡರಾದ ಧರ್ಮರಾಜ್ , ಮಂಜು ಅಣ್ಣು , ಕುಮಾರ್, ಸುಧೀಂದ್ರ, ಯುವಮೋರ್ಚಾ ಅಧ್ಯಕ್ಷ ಸಂದೇಶ್ ಹಾಗೂ ಅನೇಕರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು