11:48 AM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

Chikkamagaluru | ತರೀಕೆರೆಯ ಅಮೃತಾಪುರದಲ್ಲಿ ಚೀಟಿ ಹಣದ ವಿಚಾರವಾಗಿ ಗಲಾಟೆ: ಯುವಕನ ಬರ್ಬರ ಕೊಲೆ

21/04/2025, 16:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.

ಚೀಟಿ ಹಣದ ವಿಚಾರವಾಗಿ ಯುವಕನೊಬ್ಬನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ.
ಸಂಜು ನಾಯ್ಕ (26) ಮೃತ ದುರ್ದೈವಿ. ರುದ್ರೇಶ್ ನಾಯ್ಕ (26) ಕೊಲೆ ಆರೋಪಿಯಾಗಿದ್ದಾನೆ. ಕೊಲೆ‌ ತಪ್ಪಿಸಲು ಬಂದ ಅವಿನಾಶ್ ಗೆ ಹಲ್ಲಿನಿಂದ ಗಂಭೀರ ಗಾಯವಾಗುವಂತೆ ಕಚ್ಚಿ ರುದ್ರೇಶ್ ಗಾಯಗೊಳಿಸಿದ್ದಾನೆ.
ಅಮೃತಾಪುರ ಸೇವಾಲಾಲ್ ಸಂಘದಲ್ಲಿನ ಚೀಟಿ ವ್ಯವಹಾರ ನಡೆಸಲಾಗುತ್ತಿತ್ತು.
ಚೀಟಿ ಸರಿಯಾಗಿ ಕಟ್ಟದೇ ಸಂಜು ನಾಯ್ಕ ಗಲಾಟೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.
ಗ್ರಾಮಸ್ಥರು ಸಂಜು ನಾಯ್ಕ ನನ್ನು ನೀನು ಚೀಟಿಗೆ ಬೇಡ ವಾಪಸ್ ಕಳಿಸಿದ್ದರು. ಮನೆಗೆ ಬಂದ ಮೇಲೆ ಚೀಟಿ ಸದಸ್ಯರ ಜೊತೆ ಫೋನಿನಲ್ಲಿ ಜಗಳವಾಡಿದ್ದ. ನಂತರ ನೇರವಾಗಿ ಹೋಗಿ ಮತ್ತೆ ಜಗಳ ಮಾಡುವಾಗ ದೊಣ್ಣೆಯಲ್ಲಿ ಹೊಡೆದ ಚೀಟಿ ಸದಸ್ಯ ರುದ್ರೇಶ್ ಕೊಲೆ ಮಾಡಿದ್ದಾನೆ.
ತೀವ್ರ ರಕ್ತಸ್ರಾವದಿಂದ ಸಂಜು ನಾಯ್ಕ ಸ್ಥಳದಲ್ಲೇ ಸಾವು
ಕೊಲೆ ಆರೋಪಿ ರುದ್ರೇಶ್ ನಾಯ್ಕ ಪೊಲೀಸರ ವಶಕ್ಕೆಪಡೆದಿದ್ದಾರೆ.
ತರೀಕೆರೆ ಪೊಲೀಸರು ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು