4:07 AM Tuesday5 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

Chikkamagaluru | ತರೀಕೆರೆಯ ಅಮೃತಾಪುರದಲ್ಲಿ ಚೀಟಿ ಹಣದ ವಿಚಾರವಾಗಿ ಗಲಾಟೆ: ಯುವಕನ ಬರ್ಬರ ಕೊಲೆ

21/04/2025, 16:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.

ಚೀಟಿ ಹಣದ ವಿಚಾರವಾಗಿ ಯುವಕನೊಬ್ಬನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ.
ಸಂಜು ನಾಯ್ಕ (26) ಮೃತ ದುರ್ದೈವಿ. ರುದ್ರೇಶ್ ನಾಯ್ಕ (26) ಕೊಲೆ ಆರೋಪಿಯಾಗಿದ್ದಾನೆ. ಕೊಲೆ‌ ತಪ್ಪಿಸಲು ಬಂದ ಅವಿನಾಶ್ ಗೆ ಹಲ್ಲಿನಿಂದ ಗಂಭೀರ ಗಾಯವಾಗುವಂತೆ ಕಚ್ಚಿ ರುದ್ರೇಶ್ ಗಾಯಗೊಳಿಸಿದ್ದಾನೆ.
ಅಮೃತಾಪುರ ಸೇವಾಲಾಲ್ ಸಂಘದಲ್ಲಿನ ಚೀಟಿ ವ್ಯವಹಾರ ನಡೆಸಲಾಗುತ್ತಿತ್ತು.
ಚೀಟಿ ಸರಿಯಾಗಿ ಕಟ್ಟದೇ ಸಂಜು ನಾಯ್ಕ ಗಲಾಟೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.
ಗ್ರಾಮಸ್ಥರು ಸಂಜು ನಾಯ್ಕ ನನ್ನು ನೀನು ಚೀಟಿಗೆ ಬೇಡ ವಾಪಸ್ ಕಳಿಸಿದ್ದರು. ಮನೆಗೆ ಬಂದ ಮೇಲೆ ಚೀಟಿ ಸದಸ್ಯರ ಜೊತೆ ಫೋನಿನಲ್ಲಿ ಜಗಳವಾಡಿದ್ದ. ನಂತರ ನೇರವಾಗಿ ಹೋಗಿ ಮತ್ತೆ ಜಗಳ ಮಾಡುವಾಗ ದೊಣ್ಣೆಯಲ್ಲಿ ಹೊಡೆದ ಚೀಟಿ ಸದಸ್ಯ ರುದ್ರೇಶ್ ಕೊಲೆ ಮಾಡಿದ್ದಾನೆ.
ತೀವ್ರ ರಕ್ತಸ್ರಾವದಿಂದ ಸಂಜು ನಾಯ್ಕ ಸ್ಥಳದಲ್ಲೇ ಸಾವು
ಕೊಲೆ ಆರೋಪಿ ರುದ್ರೇಶ್ ನಾಯ್ಕ ಪೊಲೀಸರ ವಶಕ್ಕೆಪಡೆದಿದ್ದಾರೆ.
ತರೀಕೆರೆ ಪೊಲೀಸರು ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು