9:44 AM Monday23 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

03/11/2025, 17:58

ಸಂತೋಷ್ ಅತ್ತಿಗೆ ಚಿಕ್ಕಮಗಳೂರು

info.reporterkarnataka@gmail.com

ಶೃಂಗೇರಿಯಲ್ಲಿ ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ.
ಸೆರೆ ಹಿಡಿಯಲು ಬಂದಿದ್ದ ಗಜಪಡೆಯನ್ನು ಒಂಟಿ ಸಲಗ
ಗರ್ವಭಂಗವಾಗುವಂತೆ ಮಾಡಿತು. ಸೆರೆ ಹಿಡಿಯಲು ಬಂದಿದ್ದ ಸಾಕಾನೆಗಳ ಮುಂದೆ ಒಂಟಿ ಸಲಗದ ರಾಜಗಾಂಭೀರ್ಯ ನಡಿಗೆ ಹಾಕಿತು. ನನ್ನ ನೀನು ಗೆಲ್ಲಲಾರೆ ಎಂದು ಒಂಟಿ ಸಲಗ ಲುಕ್ ನೀಡಿತು. ಸಾಕಾನೆಗಳಿದ್ದ ಕ್ಯಾಂಪ್ ಮುಂದೆಯೇ ನರಹಂತಕ ಆನೆಯ ಗತ್ತಿನ ನಡಿಗೆ ಹಾಕಿತು.


ನರಹಂತಕ ಪುಂಡಾನೆ‌ಯ ಗತ್ತಿನ ನಡಿಗೆಯನ್ನು ಸ್ಥಳೀಯರು ತಮ್ಮ ಮೊಬೈಲ್ ಗಳಲ್ಲಿ ಸೆರೆ ಹಿಡಿದರು. ಭಾರೀ ಕಾರ್ಯಾಚರಣೆಯ ಬಳಿಕ ಕಾಡಾನೆಯನ್ನ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಯಿತು. ಭಗವತಿ ಕಾಡಿನಲ್ಲಿ ನರಹಂತಕ ಒಂಟಿ ಸಲಗವನ್ನು ಸೆರೆ ಹಿಡಿಯಲಾಯಿತು. ಸೆರೆಯಾಗುವುದಕ್ಕೂ ಮೊದಲೇ ಕ್ಯಾಂಪ್ ಗೆ ಒಂಟಿ ಸಲಗ ಎಂಟ್ರಿ ಕೊಟ್ಟಿತ್ತು.
ಕ್ಯಾಂಪ್ ಗೆ ಎಂಟ್ರಿಕೊಟ್ಟ ಕೆಲ ಕ್ಷಣದಲ್ಲಿ ಅರವಳಿಕೆ ನೀಡಿ ಪುಂಡಾನೆ ಸೆರೆ ಹಿಡಿಯಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು