7:09 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು | ಅಪ್ರಾಪ್ತ ಪುತ್ರನ ಎದುರೇ ಅಪ್ಪ- ಅಮ್ಮನ ಭೀಕರ ಹತ್ಯೆಗೈದ ಆರೋಪಿಗೆ ಗಲ್ಲು

13/03/2026, 16:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnata@gmail.com

8 ವರ್ಷದ ಮಗನ ಎದುರೇ ಮಲಗಿದ್ದ ದಂಪತಿಯ ಅಮಾನುಷವಾಗಿ ಕಡಿದು ಕೊಲೆ ಮಾಡಿದ ಆರೋಪಿಗೆ
ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿದೆ.
ಎನ್.ಆರ್.ಪುರದ ಕುಸುಬೂರಿನಲ್ಲಿ 2019ರಲ್ಲಿ ಈ ಭೀಕರ ಕೊಲೆ ನಡೆದಿತ್ತು.
8 ವರ್ಷದ ಮಗನ ಎದುರೇ ಆತನ ಅಪ್ಪ-ಅಮ್ಮನನ್ನು ಗೋವಿಂದಪ್ಪ ಎಂಬಾತ ಭೀಕರವಾಗಿ ಕಡಿದು ಕೊಲೆ ಮಾಡಿದ್ದ. ಕೊಲೆ ಬಳಿಕ ಮಚ್ಚನ್ನ ತೆಂಗಿನಮರದ ಸುಳಿಯಲ್ಲಿ ಆರೋಪಿ ಬಚ್ಚಿಟ್ಟಿದ್ದ. ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿತ್ತು.
ಆರೋಪಿ ಗೋವಿಂದಪ್ಪನಿಗೆ ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆಯ ತೀರ್ಪು ನೀಡಿತ್ತು. ಐಪಿಸಿ ಸೆಕ್ಷನ್ 302 ಅಡಿಯಲ್ಲಿ ಗಲ್ಲು ಶಿಕ್ಷೆ, 20 ಸಾವಿರ ದಂಡ ವಿಧಿಸಲಾಗಿದೆ. ಮನೆಗೆ ನುಗ್ಗಿದ ಪ್ರಕರಣಕ್ಕೆ ಸಂಬಂಧ ಐಪಿಸಿ 448 ಅಡಿಯಲ್ಲಿ 1 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ತೀರ್ಪು ನೀಡಿದ್ದಾರೆ. ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿ ವಿರುದ್ಧ ಸರ್ಕಾರಿ ಅಭಿಯೋಜಕಿ ಪಿ.ವೀಣಾ ವಾದ ಮಂಡನೆ ಮಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು