ಇತ್ತೀಚಿನ ಸುದ್ದಿ
Chikkamagaluru | ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿಗರ ಬಸ್ ಪಲ್ಟಿ: 3 ಮಂದಿಗೆ ಗಾಯ; ಆಸ್ಪತ್ರೆಗೆ ದಾಖಲು
29/06/2025, 11:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ಸೊಂದು ಕೊಪ್ಪ ತಾಲೂಕಿನ ಸೀಗೋಡು ಬಳಿ ಪಲ್ಟಿಯಾಗಿದ್ದು, ಮೂವರು ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಕಾರ್ತಿಕ್, ಮಧು ಹಾಗೂ ಚೈತ್ರಾ ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿದ್ದೆಗಣ್ಣು, ಘಾಟಿ ರಸ್ತೆಯಲ್ಲಿ ಚಾಲಕನ ಕಂಟ್ರೋಲ್ ತಪ್ಪಿ ಬಸ್ ಪಲ್ಟಿಯಾಗಿದೆ. ಬಸ್ಸಿನಲ್ಲಿ ಒಟ್ಟು 17 ಮಂದಿ ಪ್ರಯಾಣಿಸುತ್ತಿದ್ದರು. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 17 ಜನ ಸ್ನೇಹಿತರು ಪ್ರವಾಸ ಹೊರಟಿದ್ದರು.ಬೆಂಗಳೂರಿನಿಂದ ಆಗುಂಬೆಗೆ ಹೋಗುತ್ತಿದ್ದ ಈ ದುರ್ಘಟನೆ ನಡೆದಿದೆ.
ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.