ಇತ್ತೀಚಿನ ಸುದ್ದಿ
Chikkamagaluru | ಚಾರ್ಮಾಡಿ ಘಾಟಿಯಲ್ಲಿ ಜಾರುವ ಬಂಡೆಗಳ ಮಧ್ಯೆ ಪ್ರವಾಸಿಗರ ಅಪಾಯಕಾರಿ ಮೋಜು
27/05/2025, 13:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಪ್ರದೇಶದ ಜಲಪಾತಗಳ ಬಳಿ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ. ನಿರಂತರವಾಗಿ ನೀರು ಹರಿಯುತ್ತಿರುವ ಕಾರಣ ಬಂಡೆಗಳು ತೀವ್ರವಾಗಿ ಜಾರುತ್ತಿದ್ದು, ಅಪಾಯದ ಎಚ್ಚರಿಕೆ ನೀಡಿದರೂ ಪ್ರವಾಸಿಗರು ಜೀವದ ಹಂಗು ಮರೆತು ಜಾರುವ ಬಂಡೆಗಳ ಮೇಲೆ ಹತ್ತಿ ಸೆಲ್ಫಿ, ವಿಡಿಯೋ ತೆಗೆದುಕೊಳ್ಳುತ್ತಿದ್ದಾರೆ.
ಈ ಹಿಂದೆ ಇದೇ ಪ್ರದೇಶದಲ್ಲಿ ಬಿದ್ದು ಕೈ-ಕಾಲು ಮುರಿದುಕೊಂಡವರು, ಜೀವ ಕಳೆದುಕೊಂಡವರೂ ಇದ್ದಾರೆ. ಹೆಚ್ಚಿನ ಮಳೆಯ ಪರಿಣಾಮವಾಗಿ ಜಲಪಾತಗಳು ಉಬ್ಬಿ ಹರಿಯುತ್ತಿದ್ದು, ಜಾರುವಿಕೆ ಹೆಚ್ಚು ಸಾಧ್ಯವಾಗುತ್ತಿದೆ.
ಪೊಲೀಸರು ಸ್ಥಳದಲ್ಲಿ ಗಸ್ತು ತಿರುಗುತ್ತಿದ್ದು, ಪ್ರವಾಸಿಗರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ಆದರೂ ಕೆಲವರು ಪೊಲೀಸರ ಕಣ್ತಪ್ಪಿಸಿ ಅಪಾಯಕರ ಸ್ಥಳಗಳಿಗೆ ಪ್ರವೇಶಿಸುತ್ತಿದ್ದಾರೆ. ಪೊಲೀಸರು ಒಂದು ಕಡೆ ಎಚ್ಚರಿಕೆಯಿಂದ ನೋಡುತ್ತಿದ್ದರೆ, ಪ್ರವಾಸಿಗರು ಮತ್ತೊಂದು ಕಡೆ ಬಂಡೆಗಳ ಮೇಲೆ ಹತ್ತುತ್ತಿದ್ದಾರೆ.
ಸಾರ್ವಜನಿಕರು ತಮ್ಮ ಮತ್ತು ಇತರರ ಸುರಕ್ಷತೆಗಾಗಿ ಇಂತಹ ಸ್ಥಳಗಳಲ್ಲಿ ಮುನ್ನೆಚ್ಚರಿಕೆಯುಳ್ಳ ವರ್ತನೆ ತಾಳಬೇಕು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.