3:11 AM Sunday3 - August 2025
ಬ್ರೇಕಿಂಗ್ ನ್ಯೂಸ್
Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ

ಇತ್ತೀಚಿನ ಸುದ್ದಿ

Chikkamagaluru | ಚಾರ್ಮಾಡಿ ಘಾಟಿಯಲ್ಲಿ ಜಾರುವ ಬಂಡೆಗಳ ಮಧ್ಯೆ ಪ್ರವಾಸಿಗರ ಅಪಾಯಕಾರಿ ಮೋಜು

27/05/2025, 13:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಪ್ರದೇಶದ ಜಲಪಾತಗಳ ಬಳಿ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ. ನಿರಂತರವಾಗಿ ನೀರು ಹರಿಯುತ್ತಿರುವ ಕಾರಣ ಬಂಡೆಗಳು ತೀವ್ರವಾಗಿ ಜಾರುತ್ತಿದ್ದು, ಅಪಾಯದ ಎಚ್ಚರಿಕೆ ನೀಡಿದರೂ ಪ್ರವಾಸಿಗರು ಜೀವದ ಹಂಗು ಮರೆತು ಜಾರುವ ಬಂಡೆಗಳ ಮೇಲೆ ಹತ್ತಿ ಸೆಲ್ಫಿ, ವಿಡಿಯೋ ತೆಗೆದುಕೊಳ್ಳುತ್ತಿದ್ದಾರೆ.


ಈ ಹಿಂದೆ ಇದೇ ಪ್ರದೇಶದಲ್ಲಿ ಬಿದ್ದು ಕೈ-ಕಾಲು ಮುರಿದುಕೊಂಡವರು, ಜೀವ ಕಳೆದುಕೊಂಡವರೂ ಇದ್ದಾರೆ. ಹೆಚ್ಚಿನ ಮಳೆಯ ಪರಿಣಾಮವಾಗಿ ಜಲಪಾತಗಳು ಉಬ್ಬಿ ಹರಿಯುತ್ತಿದ್ದು, ಜಾರುವಿಕೆ ಹೆಚ್ಚು ಸಾಧ್ಯವಾಗುತ್ತಿದೆ.
ಪೊಲೀಸರು ಸ್ಥಳದಲ್ಲಿ ಗಸ್ತು ತಿರುಗುತ್ತಿದ್ದು, ಪ್ರವಾಸಿಗರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ಆದರೂ ಕೆಲವರು ಪೊಲೀಸರ ಕಣ್ತಪ್ಪಿಸಿ ಅಪಾಯಕರ ಸ್ಥಳಗಳಿಗೆ ಪ್ರವೇಶಿಸುತ್ತಿದ್ದಾರೆ. ಪೊಲೀಸರು ಒಂದು ಕಡೆ ಎಚ್ಚರಿಕೆಯಿಂದ ನೋಡುತ್ತಿದ್ದರೆ, ಪ್ರವಾಸಿಗರು ಮತ್ತೊಂದು ಕಡೆ ಬಂಡೆಗಳ ಮೇಲೆ ಹತ್ತುತ್ತಿದ್ದಾರೆ.
ಸಾರ್ವಜನಿಕರು ತಮ್ಮ ಮತ್ತು ಇತರರ ಸುರಕ್ಷತೆಗಾಗಿ ಇಂತಹ ಸ್ಥಳಗಳಲ್ಲಿ ಮುನ್ನೆಚ್ಚರಿಕೆಯುಳ್ಳ ವರ್ತನೆ ತಾಳಬೇಕು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು