3:23 AM Thursday5 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

Chikkamagaluru | ಚಾರ್ಮಾಡಿ ಘಾಟಿಯಲ್ಲಿ ಜಾರುವ ಬಂಡೆಗಳ ಮಧ್ಯೆ ಪ್ರವಾಸಿಗರ ಅಪಾಯಕಾರಿ ಮೋಜು

27/05/2025, 13:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಪ್ರದೇಶದ ಜಲಪಾತಗಳ ಬಳಿ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ. ನಿರಂತರವಾಗಿ ನೀರು ಹರಿಯುತ್ತಿರುವ ಕಾರಣ ಬಂಡೆಗಳು ತೀವ್ರವಾಗಿ ಜಾರುತ್ತಿದ್ದು, ಅಪಾಯದ ಎಚ್ಚರಿಕೆ ನೀಡಿದರೂ ಪ್ರವಾಸಿಗರು ಜೀವದ ಹಂಗು ಮರೆತು ಜಾರುವ ಬಂಡೆಗಳ ಮೇಲೆ ಹತ್ತಿ ಸೆಲ್ಫಿ, ವಿಡಿಯೋ ತೆಗೆದುಕೊಳ್ಳುತ್ತಿದ್ದಾರೆ.


ಈ ಹಿಂದೆ ಇದೇ ಪ್ರದೇಶದಲ್ಲಿ ಬಿದ್ದು ಕೈ-ಕಾಲು ಮುರಿದುಕೊಂಡವರು, ಜೀವ ಕಳೆದುಕೊಂಡವರೂ ಇದ್ದಾರೆ. ಹೆಚ್ಚಿನ ಮಳೆಯ ಪರಿಣಾಮವಾಗಿ ಜಲಪಾತಗಳು ಉಬ್ಬಿ ಹರಿಯುತ್ತಿದ್ದು, ಜಾರುವಿಕೆ ಹೆಚ್ಚು ಸಾಧ್ಯವಾಗುತ್ತಿದೆ.
ಪೊಲೀಸರು ಸ್ಥಳದಲ್ಲಿ ಗಸ್ತು ತಿರುಗುತ್ತಿದ್ದು, ಪ್ರವಾಸಿಗರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ಆದರೂ ಕೆಲವರು ಪೊಲೀಸರ ಕಣ್ತಪ್ಪಿಸಿ ಅಪಾಯಕರ ಸ್ಥಳಗಳಿಗೆ ಪ್ರವೇಶಿಸುತ್ತಿದ್ದಾರೆ. ಪೊಲೀಸರು ಒಂದು ಕಡೆ ಎಚ್ಚರಿಕೆಯಿಂದ ನೋಡುತ್ತಿದ್ದರೆ, ಪ್ರವಾಸಿಗರು ಮತ್ತೊಂದು ಕಡೆ ಬಂಡೆಗಳ ಮೇಲೆ ಹತ್ತುತ್ತಿದ್ದಾರೆ.
ಸಾರ್ವಜನಿಕರು ತಮ್ಮ ಮತ್ತು ಇತರರ ಸುರಕ್ಷತೆಗಾಗಿ ಇಂತಹ ಸ್ಥಳಗಳಲ್ಲಿ ಮುನ್ನೆಚ್ಚರಿಕೆಯುಳ್ಳ ವರ್ತನೆ ತಾಳಬೇಕು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು