4:02 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

Chikkamagaluru | ಚಾರ್ಮಾಡಿ ಘಾಟಿಯಲ್ಲಿ ಜಾರುವ ಬಂಡೆಗಳ ಮಧ್ಯೆ ಪ್ರವಾಸಿಗರ ಅಪಾಯಕಾರಿ ಮೋಜು

27/05/2025, 13:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಪ್ರದೇಶದ ಜಲಪಾತಗಳ ಬಳಿ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ. ನಿರಂತರವಾಗಿ ನೀರು ಹರಿಯುತ್ತಿರುವ ಕಾರಣ ಬಂಡೆಗಳು ತೀವ್ರವಾಗಿ ಜಾರುತ್ತಿದ್ದು, ಅಪಾಯದ ಎಚ್ಚರಿಕೆ ನೀಡಿದರೂ ಪ್ರವಾಸಿಗರು ಜೀವದ ಹಂಗು ಮರೆತು ಜಾರುವ ಬಂಡೆಗಳ ಮೇಲೆ ಹತ್ತಿ ಸೆಲ್ಫಿ, ವಿಡಿಯೋ ತೆಗೆದುಕೊಳ್ಳುತ್ತಿದ್ದಾರೆ.


ಈ ಹಿಂದೆ ಇದೇ ಪ್ರದೇಶದಲ್ಲಿ ಬಿದ್ದು ಕೈ-ಕಾಲು ಮುರಿದುಕೊಂಡವರು, ಜೀವ ಕಳೆದುಕೊಂಡವರೂ ಇದ್ದಾರೆ. ಹೆಚ್ಚಿನ ಮಳೆಯ ಪರಿಣಾಮವಾಗಿ ಜಲಪಾತಗಳು ಉಬ್ಬಿ ಹರಿಯುತ್ತಿದ್ದು, ಜಾರುವಿಕೆ ಹೆಚ್ಚು ಸಾಧ್ಯವಾಗುತ್ತಿದೆ.
ಪೊಲೀಸರು ಸ್ಥಳದಲ್ಲಿ ಗಸ್ತು ತಿರುಗುತ್ತಿದ್ದು, ಪ್ರವಾಸಿಗರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ಆದರೂ ಕೆಲವರು ಪೊಲೀಸರ ಕಣ್ತಪ್ಪಿಸಿ ಅಪಾಯಕರ ಸ್ಥಳಗಳಿಗೆ ಪ್ರವೇಶಿಸುತ್ತಿದ್ದಾರೆ. ಪೊಲೀಸರು ಒಂದು ಕಡೆ ಎಚ್ಚರಿಕೆಯಿಂದ ನೋಡುತ್ತಿದ್ದರೆ, ಪ್ರವಾಸಿಗರು ಮತ್ತೊಂದು ಕಡೆ ಬಂಡೆಗಳ ಮೇಲೆ ಹತ್ತುತ್ತಿದ್ದಾರೆ.
ಸಾರ್ವಜನಿಕರು ತಮ್ಮ ಮತ್ತು ಇತರರ ಸುರಕ್ಷತೆಗಾಗಿ ಇಂತಹ ಸ್ಥಳಗಳಲ್ಲಿ ಮುನ್ನೆಚ್ಚರಿಕೆಯುಳ್ಳ ವರ್ತನೆ ತಾಳಬೇಕು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು