6:18 PM Friday24 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು | ಕೂಲಿ ವಿವಾದ: ಕಾರ್ಮಿಕರನ್ನು ಬೆದರಿಸಲು ಹೋದ ತೋಟದ ಮಾಲೀಕನಿಂದ ಮಿಸ್‌ ಫೈರ್; ಮಗುವಿಗೆ ಗಂಭೀರ ಗಾಯ

24/07/2026, 18:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೂಲಿ ಹಣದ ವಿಚಾರವಾಗಿ ತೋಟದ ಮಾಲೀಕ ಮತ್ತು ಕಾರ್ಮಿಕರ ನಡುವೆ ಉಂಟಾದ ಜಗಳ ತಾರಕಕ್ಕೇರಿ, ಮಾಲೀಕ ನಡೆಸಿದ ಮಿಸ್‌ ಫೈರಿಂಗ್‌ನಿಂದಾಗಿ ಅಪ್ರಾಪ್ತ ಮಗುವಿನ ತಲೆಗೆ ಗಂಭೀರ ಗಾಯವಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಬಾಳೆಹಳ್ಳಿ ಗ್ರಾಮದಲ್ಲಿ ನಡೆದಿದೆ.
*​ಘಟನೆಯ ಹಿನ್ನೆಲೆ:*
​ಬಾಳೆಹಳ್ಳಿ ಗ್ರಾಮದ ತೋಟದ ಮಾಲೀಕ ಜಗದೀಶ್ ಗೌಡ ಎಂಬುವರ ಬಳಿ ಅಸ್ಸಾಂ ಮೂಲದ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ದಿನವೊಂದಕ್ಕೆ 400 ರೂಪಾಯಿ ಕೂಲಿ ನೀಡುವಂತೆ ಕಾರ್ಮಿಕರು ಪಟ್ಟು ಹಿಡಿದಿದ್ದರು. ಆದರೆ ಮಾಲೀಕ ಜಗದೀಶ್ ಗೌಡ, “ಈಗ 350 ರೂಪಾಯಿ ನೀಡುತ್ತೇನೆ, ಬಾಕಿ 50 ರೂಪಾಯಿಯನ್ನು ಆಮೇಲೆ ಕೊಡುತ್ತೇನೆ” ಎಂದು ಹೇಳಿದ್ದಾರೆ ಎನ್ನಲಾಗಿದೆ.
​ಇದಕ್ಕೆ ಒಪ್ಪದ ಕಾರ್ಮಿಕರು, “ಈಗಲೇ 400 ರೂಪಾಯಿ ಕೊಟ್ಟರೆ ಮಾತ್ರ ಕೆಲಸ ಮಾಡುತ್ತೇವೆ, ಇಲ್ಲವಾದಲ್ಲಿ ಕೆಲಸ ಮಾಡುವುದಿಲ್ಲ” ಎಂದು ಅಲ್ಲಿಂದ ಹೊರಡಲು ಅನುವಾಗಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು, ಕಾರ್ಮಿಕರು ಮಾಲೀಕನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

*​ಮಿಸ್‌ ಫೈರ್‌ – ಮಗುವಿಗೆ ಗಾಯ:*
​ಸ್ಥಿತಿ ಕೈಮೀರುತ್ತಿದ್ದಂತೆ ಕಾರ್ಮಿಕರನ್ನು ಬೆದರಿಸಲು ತೋಟದ ಮಾಲೀಕ ಜಗದೀಶ್ ಗೌಡ ಬಂದೂಕಿನಿಂದ ಗುಂಡು ಹಾರಿಸಲು ಯತ್ನಿಸಿದ್ದು, ಈ ವೇಳೆ ಆಕಸ್ಮಿಕವಾಗಿ ಮಿಸ್‌ ಫೈರ್ ಆಗಿದೆ. ಪರಿಣಾಮವಾಗಿ ಸ್ಥಳದಲ್ಲಿದ್ದ ಅಪ್ರಾಪ್ತ ಮಗುವಿನ ತಲೆಗೆ ಗುಂಡು ತಾಗಿ ಗಂಭೀರ ಗಾಯಗಳಾಗಿವೆ.

*​ಆಸ್ಪತ್ರೆಗೆ ದಾಖಲು:*
​ಗಾಯಗೊಂಡ ಮಗುವನ್ನು ತಕ್ಷಣವೇ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಆದರೆ ಮಗುವಿನ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದರಿಂದ, ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
​ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು