ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ
09/03/2026, 19:12
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಫಿನಾಡಲ್ಲಿ ಕಾಡಾನೆ ದಾಳಿ ಮುಂದುವರಿದಿದ್ದು, ಹಸುವನ್ನು ಕಾಡಾನೆಯೊಂದು ತುಳಿದು ಕೊಂದ ಘಟನೆ ಚಿಕ್ಕಮಗಳೂರು ತಾಲೂಕಿನ ಮಾಣಿಮಕ್ಕಿ ಗ್ರಾಮದಲ್ಲಿ ನಡೆದಿದೆ.
ಕಾಡಂಚಿನ ಗ್ರಾಮದ ಮೇಯುವಾಗ ಕಾಡಾನೆ ದಾಳಿ ನಡೆಸಿದೆ. ಮಾಣಿಮಕ್ಕಿ ಗ್ರಾಮದ ಮಧು ಎಂಬುವರಿಗೆ ಸೇರಿದ ಹಾಲುಕೊಡುವ ಹಸು ಇದಾಗಿದೆ. ಜಮೀನಿನ ಜೊತೆ ಹೈನುಗಾರಿಕೆ ಮೂಲಕ ಮಧು ಬದುಕು ಕಟ್ಟಿಕೊಂಡಿದ್ದರು.
ಸ್ಥಳಕ್ಕೆ ಪಶುವೈದ್ಯರ ಭೇಟಿ ನೀಡಿ ಹಸುವಿನ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.
ಕಾಡಾನೆ ದಾಳಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ. ಆನೆ ಹಾವಳಿಗೆ ಶಾಶ್ವತ ಬ್ರೇಕ್ ಹಾಕುವಂತೆ ಸ್ಥಳಿಯರ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಆಲ್ದೂರು ವಲಯ ಅರಣ್ಯಾಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.












