12:07 PM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಆನೆ ದಾಳಿಗೆ ರೈತ ಬಲಿ; ಮೃತದೇಹವನ್ನು ಕಾಡಿನಲ್ಲಿ ಎಳೆದಾಡಿದ ಒಂಟಿ ಸಲಗ

15/08/2022, 23:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಡಾನೆ ದಾಳಿಯಿಂದ ವ್ಯಕ್ತಿ ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾರ್ಗೋಡು ಗ್ರಾಮದಲ್ಲಿ ನಡೆದಿದೆ. ಮೃತರನ್ನ ಆನಂದ್ ದೇವಾಡಿಗ(52) ಎಂದು ಗುರುತಿಸಲಾಗಿದೆ. 

ಮೃತ ಆನಂದ್ ದೇವಾಡಿಗ ಮನೆಯ ಹಿಂಭಾಗದಲ್ಲಿ ಹಸುವನ್ನು ಹುಡುಕಿಕೊಂಡು ಹೋದಾಗ ಈ ದುರ್ಘಟನೆ ಸಂಭವಿಸಿದೆ. ದಾಳಿ ಮಾಡಿದ ಕಾಡಾನೆ ಸುಮಾರು ಅರ್ಧ ಕಿ.ಮೀ ಗಿಂತಲೂ ಹೆಚ್ಚು ದೂರ ಮೃತ ದೇಹವನ್ನು ಎಳೆದೊಯ್ದಿದೆ. ಕಾಡಿನ ಒಳಗೆ ಮೃತ ಆನಂದ್ ಅವರ ದೇಹದ ಅಂಗಾಗಗಳು ಕಾಡಿನ ಸುಮಾರು ಅರ್ಧ ಕಿ.ಮೀ. ವ್ಯಾಪ್ತಿಯಲ್ಲಿ ಅಲ್ಲಲ್ಲೆ ಬಿದ್ದಿವೆ. ಮೃತದೇಹ ಇರುವ ಜಾಗಕ್ಕೂ ಚಪ್ಪಲಿ ಇರುವ ಜಾಗಕ್ಕೂ ಸುಮಾರು ಅರ್ಧ ಕಿ.ಮೀ ದೂರವಿದೆ. ಅಷ್ಟೆ ಅಲ್ಲದೆ ತಲೆ ಮೆದುಳು, ಮೂಳೆಯೂ ಒಂದೊಂದು ಜಾಗದಲ್ಲಿ ಬಿದ್ದಿದೆ.  ಮೃತದೇಹವನ್ನ ಕಾಡಿನಲ್ಲಿ ಎಳೆದು ತಂದಿರುವುದರಿಂದ ಕಾಡಿನ ಮರಗಿಡಿಗಳಿಗೆ ಸಿಲುಕಿ ಮೃತದೇಹದ ಮೇಲೆ ಯಾವುದೇ ಬಟ್ಟೆ ಇಲ್ಲದಂತಾಗಿದೆ. ಛಿದ್ರವಾಗಿರುವ  ಮೃತದೇಹವನ್ನ ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ನಿನ್ನೆ ಸಂಜೆಯೂ ನಡೆದರೂ ಬೆಳಗ್ಗೆವರೆಗೂ ಯಾರಿಗೂ ಮಾಹಿತಿ ಇರಲಿಲ್ಲ. ಮನೆಯವರು ಆನಂದ್ ಎಲ್ಲೋ ಹೋಗಿದ್ದಾರೆ. ಬರುತ್ತಾರೆ ಎಂದು ಸುಮ್ಮನಾಗಿದ್ದಾರೆ. ಆದರೆ, ಬೆಳಗ್ಗೆ ಎಲ್ಲೂ ಇಲ್ಲದಾಗ ಸ್ಥಳಿಯರು ಎರಡು ಗುಂಪುಗಳಾಗಿ ಮನೆ ಹಿಂದಿನ ಕಾಡಿನಲ್ಲಿ ಹುಡುಕಾಡಿದ್ದಾರೆ. ಆಗ ಮೃತದೇಹ ಪತ್ತೆಯಾಗಿದೆ.


ಬೆಳಗ್ಗೆ ಸ್ಥಳಿಯರು ಸ್ಥಳಕ್ಕೆ ಬರುವವರೆಗೂ ಆನೆ ಮೃತದೇಹವಿದ್ದ ಸ್ಥಳದಲ್ಲೇ ಇತ್ತಂತೆ. ಸ್ಥಳಿಯರು ಬಂದ ಬಳಿಕ ಆನೆ ಹೋಗಿದೆ.ಮೂಡಿಗೆರೆ ತಾಲೂಕಿನ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಾಳಿ ಮಿತಿಮೀರಿದೆ. ಕಳೆದೊಂದು ವಾರದಿಂದ 13 ಕಾಡಾನೆಗಳ ಹಿಂಡು ತಾಲೂಕಿನಾದ್ಯಂತ ಅಲ್ಲಲ್ಲೇ ದಾಂದಲೆ ನಡೆಸುತ್ತಿವೆ. ಈ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ಇದ್ದರೂ ಕೂಡ ಪಟಾಕಿ ಸಿಡಿಸುವುದ ಬಿಟ್ಟು ಅಧಿಕಾರಿಗಳು ಏನೂ ಮಾಡುವುದಿಲ್ಲ ಎಂದು ಸ್ಥಳಿಯರು ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು