8:25 AM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಆನೆ ದಾಳಿಗೆ ರೈತ ಬಲಿ; ಮೃತದೇಹವನ್ನು ಕಾಡಿನಲ್ಲಿ ಎಳೆದಾಡಿದ ಒಂಟಿ ಸಲಗ

15/08/2022, 23:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಡಾನೆ ದಾಳಿಯಿಂದ ವ್ಯಕ್ತಿ ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾರ್ಗೋಡು ಗ್ರಾಮದಲ್ಲಿ ನಡೆದಿದೆ. ಮೃತರನ್ನ ಆನಂದ್ ದೇವಾಡಿಗ(52) ಎಂದು ಗುರುತಿಸಲಾಗಿದೆ. 

ಮೃತ ಆನಂದ್ ದೇವಾಡಿಗ ಮನೆಯ ಹಿಂಭಾಗದಲ್ಲಿ ಹಸುವನ್ನು ಹುಡುಕಿಕೊಂಡು ಹೋದಾಗ ಈ ದುರ್ಘಟನೆ ಸಂಭವಿಸಿದೆ. ದಾಳಿ ಮಾಡಿದ ಕಾಡಾನೆ ಸುಮಾರು ಅರ್ಧ ಕಿ.ಮೀ ಗಿಂತಲೂ ಹೆಚ್ಚು ದೂರ ಮೃತ ದೇಹವನ್ನು ಎಳೆದೊಯ್ದಿದೆ. ಕಾಡಿನ ಒಳಗೆ ಮೃತ ಆನಂದ್ ಅವರ ದೇಹದ ಅಂಗಾಗಗಳು ಕಾಡಿನ ಸುಮಾರು ಅರ್ಧ ಕಿ.ಮೀ. ವ್ಯಾಪ್ತಿಯಲ್ಲಿ ಅಲ್ಲಲ್ಲೆ ಬಿದ್ದಿವೆ. ಮೃತದೇಹ ಇರುವ ಜಾಗಕ್ಕೂ ಚಪ್ಪಲಿ ಇರುವ ಜಾಗಕ್ಕೂ ಸುಮಾರು ಅರ್ಧ ಕಿ.ಮೀ ದೂರವಿದೆ. ಅಷ್ಟೆ ಅಲ್ಲದೆ ತಲೆ ಮೆದುಳು, ಮೂಳೆಯೂ ಒಂದೊಂದು ಜಾಗದಲ್ಲಿ ಬಿದ್ದಿದೆ.  ಮೃತದೇಹವನ್ನ ಕಾಡಿನಲ್ಲಿ ಎಳೆದು ತಂದಿರುವುದರಿಂದ ಕಾಡಿನ ಮರಗಿಡಿಗಳಿಗೆ ಸಿಲುಕಿ ಮೃತದೇಹದ ಮೇಲೆ ಯಾವುದೇ ಬಟ್ಟೆ ಇಲ್ಲದಂತಾಗಿದೆ. ಛಿದ್ರವಾಗಿರುವ  ಮೃತದೇಹವನ್ನ ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ನಿನ್ನೆ ಸಂಜೆಯೂ ನಡೆದರೂ ಬೆಳಗ್ಗೆವರೆಗೂ ಯಾರಿಗೂ ಮಾಹಿತಿ ಇರಲಿಲ್ಲ. ಮನೆಯವರು ಆನಂದ್ ಎಲ್ಲೋ ಹೋಗಿದ್ದಾರೆ. ಬರುತ್ತಾರೆ ಎಂದು ಸುಮ್ಮನಾಗಿದ್ದಾರೆ. ಆದರೆ, ಬೆಳಗ್ಗೆ ಎಲ್ಲೂ ಇಲ್ಲದಾಗ ಸ್ಥಳಿಯರು ಎರಡು ಗುಂಪುಗಳಾಗಿ ಮನೆ ಹಿಂದಿನ ಕಾಡಿನಲ್ಲಿ ಹುಡುಕಾಡಿದ್ದಾರೆ. ಆಗ ಮೃತದೇಹ ಪತ್ತೆಯಾಗಿದೆ.


ಬೆಳಗ್ಗೆ ಸ್ಥಳಿಯರು ಸ್ಥಳಕ್ಕೆ ಬರುವವರೆಗೂ ಆನೆ ಮೃತದೇಹವಿದ್ದ ಸ್ಥಳದಲ್ಲೇ ಇತ್ತಂತೆ. ಸ್ಥಳಿಯರು ಬಂದ ಬಳಿಕ ಆನೆ ಹೋಗಿದೆ.ಮೂಡಿಗೆರೆ ತಾಲೂಕಿನ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಾಳಿ ಮಿತಿಮೀರಿದೆ. ಕಳೆದೊಂದು ವಾರದಿಂದ 13 ಕಾಡಾನೆಗಳ ಹಿಂಡು ತಾಲೂಕಿನಾದ್ಯಂತ ಅಲ್ಲಲ್ಲೇ ದಾಂದಲೆ ನಡೆಸುತ್ತಿವೆ. ಈ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ಇದ್ದರೂ ಕೂಡ ಪಟಾಕಿ ಸಿಡಿಸುವುದ ಬಿಟ್ಟು ಅಧಿಕಾರಿಗಳು ಏನೂ ಮಾಡುವುದಿಲ್ಲ ಎಂದು ಸ್ಥಳಿಯರು ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು