10:18 AM Tuesday19 - May 2026
ಬ್ರೇಕಿಂಗ್ ನ್ಯೂಸ್
ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು.

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಆನೆ ದಾಳಿಗೆ ರೈತ ಬಲಿ; ಮೃತದೇಹವನ್ನು ಕಾಡಿನಲ್ಲಿ ಎಳೆದಾಡಿದ ಒಂಟಿ ಸಲಗ

15/08/2022, 23:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಡಾನೆ ದಾಳಿಯಿಂದ ವ್ಯಕ್ತಿ ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾರ್ಗೋಡು ಗ್ರಾಮದಲ್ಲಿ ನಡೆದಿದೆ. ಮೃತರನ್ನ ಆನಂದ್ ದೇವಾಡಿಗ(52) ಎಂದು ಗುರುತಿಸಲಾಗಿದೆ. 

ಮೃತ ಆನಂದ್ ದೇವಾಡಿಗ ಮನೆಯ ಹಿಂಭಾಗದಲ್ಲಿ ಹಸುವನ್ನು ಹುಡುಕಿಕೊಂಡು ಹೋದಾಗ ಈ ದುರ್ಘಟನೆ ಸಂಭವಿಸಿದೆ. ದಾಳಿ ಮಾಡಿದ ಕಾಡಾನೆ ಸುಮಾರು ಅರ್ಧ ಕಿ.ಮೀ ಗಿಂತಲೂ ಹೆಚ್ಚು ದೂರ ಮೃತ ದೇಹವನ್ನು ಎಳೆದೊಯ್ದಿದೆ. ಕಾಡಿನ ಒಳಗೆ ಮೃತ ಆನಂದ್ ಅವರ ದೇಹದ ಅಂಗಾಗಗಳು ಕಾಡಿನ ಸುಮಾರು ಅರ್ಧ ಕಿ.ಮೀ. ವ್ಯಾಪ್ತಿಯಲ್ಲಿ ಅಲ್ಲಲ್ಲೆ ಬಿದ್ದಿವೆ. ಮೃತದೇಹ ಇರುವ ಜಾಗಕ್ಕೂ ಚಪ್ಪಲಿ ಇರುವ ಜಾಗಕ್ಕೂ ಸುಮಾರು ಅರ್ಧ ಕಿ.ಮೀ ದೂರವಿದೆ. ಅಷ್ಟೆ ಅಲ್ಲದೆ ತಲೆ ಮೆದುಳು, ಮೂಳೆಯೂ ಒಂದೊಂದು ಜಾಗದಲ್ಲಿ ಬಿದ್ದಿದೆ.  ಮೃತದೇಹವನ್ನ ಕಾಡಿನಲ್ಲಿ ಎಳೆದು ತಂದಿರುವುದರಿಂದ ಕಾಡಿನ ಮರಗಿಡಿಗಳಿಗೆ ಸಿಲುಕಿ ಮೃತದೇಹದ ಮೇಲೆ ಯಾವುದೇ ಬಟ್ಟೆ ಇಲ್ಲದಂತಾಗಿದೆ. ಛಿದ್ರವಾಗಿರುವ  ಮೃತದೇಹವನ್ನ ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ನಿನ್ನೆ ಸಂಜೆಯೂ ನಡೆದರೂ ಬೆಳಗ್ಗೆವರೆಗೂ ಯಾರಿಗೂ ಮಾಹಿತಿ ಇರಲಿಲ್ಲ. ಮನೆಯವರು ಆನಂದ್ ಎಲ್ಲೋ ಹೋಗಿದ್ದಾರೆ. ಬರುತ್ತಾರೆ ಎಂದು ಸುಮ್ಮನಾಗಿದ್ದಾರೆ. ಆದರೆ, ಬೆಳಗ್ಗೆ ಎಲ್ಲೂ ಇಲ್ಲದಾಗ ಸ್ಥಳಿಯರು ಎರಡು ಗುಂಪುಗಳಾಗಿ ಮನೆ ಹಿಂದಿನ ಕಾಡಿನಲ್ಲಿ ಹುಡುಕಾಡಿದ್ದಾರೆ. ಆಗ ಮೃತದೇಹ ಪತ್ತೆಯಾಗಿದೆ.


ಬೆಳಗ್ಗೆ ಸ್ಥಳಿಯರು ಸ್ಥಳಕ್ಕೆ ಬರುವವರೆಗೂ ಆನೆ ಮೃತದೇಹವಿದ್ದ ಸ್ಥಳದಲ್ಲೇ ಇತ್ತಂತೆ. ಸ್ಥಳಿಯರು ಬಂದ ಬಳಿಕ ಆನೆ ಹೋಗಿದೆ.ಮೂಡಿಗೆರೆ ತಾಲೂಕಿನ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಾಳಿ ಮಿತಿಮೀರಿದೆ. ಕಳೆದೊಂದು ವಾರದಿಂದ 13 ಕಾಡಾನೆಗಳ ಹಿಂಡು ತಾಲೂಕಿನಾದ್ಯಂತ ಅಲ್ಲಲ್ಲೇ ದಾಂದಲೆ ನಡೆಸುತ್ತಿವೆ. ಈ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ಇದ್ದರೂ ಕೂಡ ಪಟಾಕಿ ಸಿಡಿಸುವುದ ಬಿಟ್ಟು ಅಧಿಕಾರಿಗಳು ಏನೂ ಮಾಡುವುದಿಲ್ಲ ಎಂದು ಸ್ಥಳಿಯರು ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು