4:09 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಆನೆ ದಾಳಿಗೆ ರೈತ ಬಲಿ; ಮೃತದೇಹವನ್ನು ಕಾಡಿನಲ್ಲಿ ಎಳೆದಾಡಿದ ಒಂಟಿ ಸಲಗ

15/08/2022, 23:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಡಾನೆ ದಾಳಿಯಿಂದ ವ್ಯಕ್ತಿ ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾರ್ಗೋಡು ಗ್ರಾಮದಲ್ಲಿ ನಡೆದಿದೆ. ಮೃತರನ್ನ ಆನಂದ್ ದೇವಾಡಿಗ(52) ಎಂದು ಗುರುತಿಸಲಾಗಿದೆ. 

ಮೃತ ಆನಂದ್ ದೇವಾಡಿಗ ಮನೆಯ ಹಿಂಭಾಗದಲ್ಲಿ ಹಸುವನ್ನು ಹುಡುಕಿಕೊಂಡು ಹೋದಾಗ ಈ ದುರ್ಘಟನೆ ಸಂಭವಿಸಿದೆ. ದಾಳಿ ಮಾಡಿದ ಕಾಡಾನೆ ಸುಮಾರು ಅರ್ಧ ಕಿ.ಮೀ ಗಿಂತಲೂ ಹೆಚ್ಚು ದೂರ ಮೃತ ದೇಹವನ್ನು ಎಳೆದೊಯ್ದಿದೆ. ಕಾಡಿನ ಒಳಗೆ ಮೃತ ಆನಂದ್ ಅವರ ದೇಹದ ಅಂಗಾಗಗಳು ಕಾಡಿನ ಸುಮಾರು ಅರ್ಧ ಕಿ.ಮೀ. ವ್ಯಾಪ್ತಿಯಲ್ಲಿ ಅಲ್ಲಲ್ಲೆ ಬಿದ್ದಿವೆ. ಮೃತದೇಹ ಇರುವ ಜಾಗಕ್ಕೂ ಚಪ್ಪಲಿ ಇರುವ ಜಾಗಕ್ಕೂ ಸುಮಾರು ಅರ್ಧ ಕಿ.ಮೀ ದೂರವಿದೆ. ಅಷ್ಟೆ ಅಲ್ಲದೆ ತಲೆ ಮೆದುಳು, ಮೂಳೆಯೂ ಒಂದೊಂದು ಜಾಗದಲ್ಲಿ ಬಿದ್ದಿದೆ.  ಮೃತದೇಹವನ್ನ ಕಾಡಿನಲ್ಲಿ ಎಳೆದು ತಂದಿರುವುದರಿಂದ ಕಾಡಿನ ಮರಗಿಡಿಗಳಿಗೆ ಸಿಲುಕಿ ಮೃತದೇಹದ ಮೇಲೆ ಯಾವುದೇ ಬಟ್ಟೆ ಇಲ್ಲದಂತಾಗಿದೆ. ಛಿದ್ರವಾಗಿರುವ  ಮೃತದೇಹವನ್ನ ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ನಿನ್ನೆ ಸಂಜೆಯೂ ನಡೆದರೂ ಬೆಳಗ್ಗೆವರೆಗೂ ಯಾರಿಗೂ ಮಾಹಿತಿ ಇರಲಿಲ್ಲ. ಮನೆಯವರು ಆನಂದ್ ಎಲ್ಲೋ ಹೋಗಿದ್ದಾರೆ. ಬರುತ್ತಾರೆ ಎಂದು ಸುಮ್ಮನಾಗಿದ್ದಾರೆ. ಆದರೆ, ಬೆಳಗ್ಗೆ ಎಲ್ಲೂ ಇಲ್ಲದಾಗ ಸ್ಥಳಿಯರು ಎರಡು ಗುಂಪುಗಳಾಗಿ ಮನೆ ಹಿಂದಿನ ಕಾಡಿನಲ್ಲಿ ಹುಡುಕಾಡಿದ್ದಾರೆ. ಆಗ ಮೃತದೇಹ ಪತ್ತೆಯಾಗಿದೆ.


ಬೆಳಗ್ಗೆ ಸ್ಥಳಿಯರು ಸ್ಥಳಕ್ಕೆ ಬರುವವರೆಗೂ ಆನೆ ಮೃತದೇಹವಿದ್ದ ಸ್ಥಳದಲ್ಲೇ ಇತ್ತಂತೆ. ಸ್ಥಳಿಯರು ಬಂದ ಬಳಿಕ ಆನೆ ಹೋಗಿದೆ.ಮೂಡಿಗೆರೆ ತಾಲೂಕಿನ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಾಳಿ ಮಿತಿಮೀರಿದೆ. ಕಳೆದೊಂದು ವಾರದಿಂದ 13 ಕಾಡಾನೆಗಳ ಹಿಂಡು ತಾಲೂಕಿನಾದ್ಯಂತ ಅಲ್ಲಲ್ಲೇ ದಾಂದಲೆ ನಡೆಸುತ್ತಿವೆ. ಈ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ಇದ್ದರೂ ಕೂಡ ಪಟಾಕಿ ಸಿಡಿಸುವುದ ಬಿಟ್ಟು ಅಧಿಕಾರಿಗಳು ಏನೂ ಮಾಡುವುದಿಲ್ಲ ಎಂದು ಸ್ಥಳಿಯರು ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು