12:24 PM Sunday21 - September 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ದೇವರ ಮನೆ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷ: ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

01/04/2022, 23:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ದೇವರಮನೆ ರಸ್ತೆಯಲ್ಲಿ ಕಾಡಾನೆಯೊಂದು ಕಾಣಿಸಿಕೊಂಡು ದೇವರಮನೆಗೆ ಹೋಗಿ ಹಿಂದಿರುಗುತ್ತಿದ್ದ ಪ್ರಯಾಣಿಕರೊಬ್ಬರು ಕೂದಲೆಳೆ ಅಂತರದಲ್ಲಿ ಕಾಡಾನೆ ದಾಳಿಯಿಂದ ಪಾರಾಗಿದ್ದಾರೆ.

ಬಕ್ಕಿ ಗ್ರಾಮದ ಸುರೇಂದ್ರ ಎಂಬುವವರು ಕುಟುಂಬದವರೊಂದಿಗೆ ದೇವರಮನೆ ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ರಸ್ತೆಯಲ್ಲಿ ಕಾಡಾನೆ ಕಾಣಿಸಿಕೊಂಡಿದೆ. ಕಾರಿನಲ್ಲಿದ್ದವರು ಕಾರಿನ ಹೆಡ್‍ಲೈಟ್ ಆಪ್ ಮಾಡಿ ಕಾರನ್ನು ಕೆಲಕಾಲ ರಸ್ತೆಯಲ್ಲೆ ನಿಲ್ಲಿಸಿಕೊಂಡಿದ್ದಾರೆ. ಕಾಡಾನೆ ಕಾರಿನ ಸಮೀಪವೇ ಬಂದು ಕೆಲ ಕಾಲ ನಿಂತಿದ್ದು ನಂತರ ಕಾಡಿನ ಕಡೆಗೆ ಸಾಗಿದೆ. 

ದೇವರ ಮನೆ ಭಾಗದಲ್ಲಿ ಕಾಡಾನೆಗಳ ಸಂಚಾರ ಹೆಚ್ಚಿದ್ದು ರಾತ್ರಿ  ಸಮಯದಲ್ಲಿ ಸಂಚರಿಸಲು ಪ್ರಯಾಣಿಕರು ಭಯಪಡುವಂತಾಗಿದೆ. ಕಾಡಾನೆಯಿಂದ ಅನಾಹುತ ಸಂಭವಿಸುವ ಮುನ್ನ ಅರಣ್ಯ ಇಲಾಖೆ ಈ ಬಗ್ಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು