7:50 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲಾದ್ಯಂತ ತ್ಯಾಗ, ಬಲಿದಾನದ ಹಬ್ಬ ಬಕ್ರೀದ್ ಆಚರಣೆ: ಸಾಮೂಹಿಕ ಪ್ರಾರ್ಥನೆ

29/06/2023, 19:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಗುರುವಾರ ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಬಣಕಲ್, ಕೊಟ್ಟಿಗೆಹಾರ, ಚಕ್ಕಮಕ್ಕಿ,ಗಬ್ಗಲ್ ಸೇರಿದಂತೆ ಹಲವೆಡೆ ಮುಸ್ಲಿಂ ಬಾಂಧವರು ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ತ್ಯಾಗ ಬಲಿದಾನದ ಹಬ್ಬದ ಶುಭಾಶಯ ಕೋರಿದರು.


ಕೊಟ್ಟಿಗೆಹಾರದ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬದ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಧರ್ಮಗುರು ಅಬ್ದುಲ್ ರೆಹಮಾನ್ ಫೈಝಿ ಮಾತನಾಡಿ’ ಪ್ರವಾದಿ ಇಬ್ರಾಹಿಂ ಅವರ ತ್ಯಾಗವನ್ನು ನೆನಪಿಸಲು ಹಬ್ಬದ ದಿನ ಕುರಿ ಬಲಿದಾನ ನೀಡಲಾಗುತ್ತದೆ. ಆರ್ಥಿಕವಾಗಿ ಸಬಲರಾಗಿರುವ ಎಲ್ಲರೂ ದಾನ ಮಾಡುವ ಮೂಲಕ ಹಾಗೂ ಅಲ್ಲಾಹುಗೆ ಬಲಿದಾನ ನೀಡಿದ ಮಾಂಸವನ್ನು ಮೂರು ಪಾಲು ಮಾಡಿ ಒಂದು ಪಾಲು ತಾವು ಬಳಸಿ ಉಳಿದುದನ್ನು ಬಡವರಿಗೆ ಹಂಚಬೇಕು.ಇದರಿಂದ ಈ ಹಬ್ಬ ಭೇಧಬಾವ ಹೊಂದದೇ ಸಮಾನತೆಯಿಂದ ಹಬ್ಬ ಆಚರಿಸಲಾಗುತ್ತದೆ’ ಎಂದರು. ಅಧ್ಯಕ್ಷ ಮುನೀರ್, ಹಾಜಿ ಟಿ.ಎ.ಖಾದರ್,ಸಿದ್ದಿಕ್, ಹಾಜಿ ಯಾಕೂಬ್,ತನುಕೊಟ್ಟಿಗೆಹಾರ,ಮೊಯಿದ್ದೀನ್, ಮತ್ತಿತರರು ಭಾಗವಹಿಸಿದ್ದರು. ವಿಶೇಷ ಪ್ರಾರ್ಥನೆಯ ಬಳಿಕ ಮುಸ್ಲಿಂ ಬಾಂದವರು ಖಬರ್ ಸ್ತಾನಕ್ಕೆ ತೆರಳಿ ಅಗಲಿದ ಕುಟುಂಬದ ಸದಸ್ಯರಿಗಾಗಿ ವಿಶೇಷವಾಗಿ ಮುಕ್ತಿ ಸಿಗಲೆಂದು ಪ್ರಾರ್ಥಿಸಿದರು. ಕೊಟ್ಟಿಗೆಹಾರ ಸುತ್ತಮುತ್ತಲಿನ ಮುಸ್ಲಿಂ ಭಾಂದವರು ಮಸೀದಿಯಲ್ಲಿ ಸೇರಿದ್ದರು. ಬಣಕಲ್ ಜುಮ್ಮಾ ಮಸೀದಿಯಲ್ಲಿ ದರ್ಮಗುರು ಆರೀಸ್ ಮಾತನಾಡಿ ‘ಬಕ್ರೀದ್ ಹಬ್ಬವು ಸಮಾನತೆಯ ಹಬ್ಬವಾಗಿದ್ದು ಬಡವ ಬಲ್ಲಿದ ಎಂಬ ತಾರತಮ್ಯವಿಲ್ಲದೇ ತಾವೆಲ್ಲರೂ ಒಂದೇ ಎಂಬ ಭಾವೈಕ್ಯತೆಯಿಂದ ಹಬ್ಬ ಆಚರಿಸಲಾಗುತ್ತದೆ.ಬಡವರಿಗೆ ದಾನ ಮಾಡುವುದೇ ಈ ಹಬ್ಬದ ಮೂಲ ಉದ್ದೇಶವಾಗಿದೆ’ ಎಂದರು. ಹಲವು ಮಸೀದಿಗಳಲ್ಲಿ ಕುರಾನ್ ಪಠಿಸಿ ವಿಶೇಷವಾಗಿ ಪ್ರಾರ್ಥಿಸಿದರು. ಬಣಕಲ್ ಸುತ್ತಮುತ್ತ ಮಸೀದಿಗಳಲ್ಲೂ ನಮಾಜ್ ಮಾಡಿ ಪರಸ್ಪರ ಹಬ್ಬದ ಶುಭಾಶಯ ಕೋರಿದರು.ಕೊಟ್ಟಿಗೆಹಾರ,ಗಬ್ಗಲ್, ಬಣಕಲ್, ಬಗ್ಗಸಗೋಡು,ಬೆಟ್ಟಗೆರೆ ಹಳಿಕೆ ಮಸೀದಿಗಳಲ್ಲೂ ಮುಸ್ಲಿಂ ಮಕ್ಕಳು ಹಾಗೂ ಹಿರಿಯರು ಹೊಸ ಬಟ್ಟೆ ತೊಟ್ಟು ಮಸೀದಿಯಲ್ಲಿ ಹಬ್ಬದ ವಿಶೇಷ ಪ್ರಾರ್ಥನೆಯಲ್ಲಿ ತೊಡಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು