9:26 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ನಮಾಜ್ ವೇಳೆ ಈದ್ಗಾ ಮೈದಾನದಲ್ಲಿ ಕಾಂಗ್ರೆಸ್ ಪ್ರಚಾರಕ್ಕೆ ಮುಸ್ಲಿಮರ ಕಿಡಿ: ಸ್ಥಳದಿಂದ ಕಾಲ್ಕಿತ್ತ ಕೈ ಅಭ್ಯರ್ಥಿ

22/04/2023, 23:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka agnail.com

ಚಿಕ್ಕಮಗಳೂರು ಈದ್ಗಾ ಮೈದಾನದಲ್ಲಿ ನಮಾಜ್ ಮಾಡುತ್ತಿದ್ದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಡಿ.ತಮ್ಮಯ್ಯ ಪರ ಪ್ರಚಾರ ನಡೆಸಿದಕ್ಕೆ ಮುಸ್ಲಿಮರು ಕಿಡಿ ಕಾರಿದ್ದಾರೆ.
ಎರಡು ಮುಸ್ಲಿಂ ಗುಂಪುಗಳ ನಡುವೆ ವಾಕ್ಸಮರ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಎಚ್. ಡಿ. ತಮ್ಮಯ್ಯ ಅವರು ಮೂಕ ಪ್ರೇಕ್ಷಕರಾಗಿ ನಿಂತು ನೋಡುತ್ತಿದ್ದರು. ಚಿಕ್ಕಮಗಳೂರು ನಗರದ ಕೆಇಬಿ ಸರ್ಕಲ್ ನಲ್ಲಿರುವ ಈದ್ಗಾ ಮೈದಾನದಲ್ಲಿ ಈ ಘಟನೆ ನಡೆದಿದೆ.


ರಂಜಾನ್ ವೇಳೆ ಮುಸ್ಲಿಮರು ಪ್ರಾರ್ಥನೆ ಸಲ್ಲಿಸು ವೇಳೆ ಕಾಂಗ್ರೆಸ್ ಪ್ರಚಾರ ನಡೆಸಿತ್ತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ಅವರು
ಮುಸ್ಲಿಮರ ಸಮಾಧಾನಕ್ಕೆ ಮುಂದಾದರು. ನಂತರ ಸ್ಥಳದಿಂದ ಕಾಂಗ್ರೆಸ್ ಅಭ್ಯರ್ಥಿ ತಮ್ಮಯ್ಯ ಕಾಲ್ಕಿತ್ತರು. ಅಲ್ಪಸಂಖ್ಯಾತರ ಅಸಮಾಧಾನದಿಂದ ಕಾಂಗ್ರೆಸ್ ಅಭ್ಯರ್ಥಿ ಮುಜುಗರಕ್ಕೀಡಾದರು.
ಚಿಕ್ಕಮಗಳೂಲ್ಲಿ ಸಿ.ಟಿ.ರವಿ-ಹೆಚ್.ಡಿ.ತಮ್ಮಯ್ಯ ನೇರಾನೇರ ಹಣಾಹಣಿ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು