9:17 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಚಿಕ್ಕಬಳ್ಳಾಪುರ: ಭೀಕರ ರಸ್ತೆ ಅಪಘಾತಕ್ಕೆ ಮಗು ಸಹಿತ 13 ಮಂದಿ ದಾರುಣ ಸಾವು: ರಸ್ತೆ ಬದಿ ನಿಂತಿದ್ದ ಲಾರಿಗೆ ಟಾಟಾ ಸುಮೋ ವಾಹನ ಡಿಕ್ಕಿ

27/10/2023, 11:40

ಚಿಕ್ಕಬಳ್ಳಾಪುರ(reporterkarnataka.com): ಇಲ್ಲಿನ ಚಿತ್ರಾವತಿ ಸಮೀಪದ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸಹಿತ 13 ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

ರಸ್ತೆ ಬದಿ ನಿಂತಿದ್ದ ಸಿಮೆಂಟ್ ಲಾರಿಗೆ ಹಿಂಬದಿಯಿಂದ ಟಾಟಾ ಸುಮೋ ವಾಹನ ಡಿಕ್ಕಿ ಹೊಡೆದ ಪರಿಣಾಮ, ಟಾಟಾ ಸುಮೋದಲ್ಲಿದ್ದ 13 ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ 8 ಮಂದಿ ಪುರುಷರು, ನಾಲ್ವರು ಮಹಿಳೆಯರು ಹಾಗೂ ಒಂದು ಗಂಡು ಮಗು ಸೇರಿದೆ. ಮೃತರನ್ನು ದೊಡ್ಡಬಳ್ಳಾಪುರದ ಅರುಣ (40), ಅವರ ಮಗ ಹೃತ್ವಿಕ್ ಯತಿನ್ (6), ಬೆಂಗಳೂರಿನ ಬಸವೇಶ್ವರ ನಗರದ ಸುಬ್ಬಮ್ಮ, ಆಂಧ್ರಪ್ರದೇಶದ ಕೊತ್ತಚೆರಮ ನಿವಾಸಿ ಪರುಮಾಳ್, ಕಾವಲ್ ಭೈರಸಂದ್ರದ ನರಸಿಂಹಮೂರ್ತಿ, ಚಾಲಕ ನರಸಿಂಹಪ್ಪ ಎಂದು ಗುರುತಿಸಲಾಗಿದೆ. ಉಳಿದವರ ಮಾಹಿತಿ ಇನ್ನು ಲಭ್ಯವಾಗಬೇಕಿದೆ.
ಮೃತಪಟ್ಟವರಲ್ಲಿ ಹೆಚ್ಚಿನವರು ಕೂಲಿಕಾರ್ಮಿಕರಾಗಿದ್ದಾರೆ. ಇವರೆಲ್ಲ ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳುತ್ತಿದ್ದರು. ಆಂಧ್ರದ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಟಾಟಾ ಸುಮೋದಲ್ಲಿ ಬಾಗೇಪಲ್ಲಿ – ಚಿಕ್ಕಬಳ್ಳಾಪುರ ನಡುವಿನ ವಿವಿಧ ಪ್ರದೇಶಗಳಲ್ಲಿ ವಾಹನವೇರಿದ್ದರು ಎಂದು ಹೇಳಲಾಗಿದೆ.
ಅವಘಡದಲ್ಲಿ 12 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ದಟ್ಟ ಮಂಜು ಕವಿದಿದ್ದರಿಂದ ಟಾಟಾ ಸುಮೋ ವಾಹನ ಚಾಲಕನಿಗೆ ರಸ್ತೆ ಬದಿ ನಿಂತಿದ್ದ ಲಾರಿ ಕಾಣದೆ ಡಿಕ್ಕಿ ಹೊಡೆದಿದ್ದಾನೆ ಎಂದು ಹೇಳಲಾಗಿದೆ.
ಚಿಕ್ಕಬಳ್ಳಾಪುರದ ಚಿತ್ರಾವತಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ ಎರಡು ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು