5:54 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: 30 ಮಂಗಗಳ ಮಾರಣ ಹೋಮ; ಜ್ಞಾನ ತಪ್ಪುವ ಔಷಧವಿಟ್ಟು ತಲೆಗೆ ಹೊಡೆದು ಭೀಕರ ಹತ್ಯೆ

07/06/2024, 17:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಬಾಳೆಹಣ್ಣಿಗೆ ಜ್ಞಾನ ತಪ್ಪುವ ಔಷಧವಿಟ್ಟು 30 ಮಂಗಗಳನ್ನ ಕೊಂದ ಅಮಾನವೀಯ ಘಟನೆ ಎನ್.ಆರ್.ಪುರ ತಾಲೂಕಿನ ದ್ಯಾವಣ ಬಳಿ ನಡೆದಿದೆ.

ಮನುಷ್ಯತ್ವಹೀನರು 16 ಗಂಡು, 14 ಹೆಣ್ಣು ಮತ್ತು 4 ಮರಿಗಳ ಮಾರಣ ಹೋಮ ನಡೆಸಿದ್ದಾರೆ.
30 ಮಂಗಗಳನ್ನ ಕೊಂದು ರಸ್ತೆ ತಂದು ಪಾಪಿಗಳು ಎಸೆದು ಹೋಗಿದ್ದಾರೆ.
ಮಂಗಗಳು ಜ್ಞಾನ ತಪ್ಪಿದ ಬಳಿಕ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. 30 ಮಂಗಗಳ ತಲೆಯಲ್ಲೂ ಒಂದೇ ರೀತಿ ಗಾಯವಾಗಿ ರಕ್ತಸುರಿದು ಸಾವನ್ನಪ್ಪಿವೆ.
ಸ್ಥಳಕ್ಕೆ ವಿವಿಧ ಇಲಾಖೆಯ ಎಲ್ಲಾ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಡಿ.ಎಫ್.ಓ, ಆರ್.ಎಫ್.ಓ, ಪಿ.ಎಸ್.ಐ. ಪಶುಸಂಗೋಪನೆ, ಪಶುವೈದ್ಯ, ಪಂಚಾಯಿತಿ, ಆಶಾಕಾರ್ಯರ್ತೆಯರು ಭೇಟಿ ನೀಡಿದ್ದಾರೆ.
ಮಂಗಗಳ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಂಗಗಳ ಮಾರಣ ಹೋಮಕ್ಕೆ ಪ್ರಾಣಿಪ್ರಿಯರು ಕಿಡಿ ಎನ್.ಆರ್.ಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು