4:16 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಅಮಾನತುಗೊಂಡ ಪೊಲೀಸರ ಕುಟುಂಬದಿಂದ ಠಾಣೆ ಮುಂಭಾಗ ಪ್ರೊಟೆಸ್ಟ್

02/12/2023, 21:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಕೀಲರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಅಮಾನತಿಗೊಳಗಾದ 6 ಮಂದಿ ಪೊಲೀಸ್ ಸಿಬ್ಬಂದಿಗಳ ಕುಟುಂಬಸ್ಥರು ಶನಿವಾರ ಚಿಕ್ಕಮಗಳೂರು ನಗರದ ಟೌನ್ ಠಾಣೆ ಬಳಿ ಧರಣಿ ನಡೆಸಿದರು.
6 ಮಂದಿ ಪೊಲೀಸರ ವಿರುದ್ದ ಐಪಿಸಿ 307 ಅಡಿ ಪ್ರಕರಣ ದಾಖಲು ಮಾಡಲಾಗಿತ್ತು.
ಓರ್ವ ಪಿಎಸ್ ಐ, ಓರ್ವ ಎಎಸ್ಐ, ಓರ್ವ ಎಚ್.ಸಿ, ಮೂವರು ಪೇದೆಗಳ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗಿತ್ತು.
6 ಮಂದಿ ಪೊಲೀಸರನ್ನು ಬಂಧಿಸುವಂತೆ ಆಗ್ರಹಿಸಿ
ವಕೀಲರ ಸಂಘ ಪ್ರತಿಭಟನೆ ನಡೆಸಿತ್ತು.
ಇಂದು ಅಮಾನತಿಗೊಳಗಾದ ಪೊಲೀಸರ ಕುಟುಂಬದಿಂದ ಸ್ಟೇಷನ್ ಮುಂಭಾಗ ಧರಣಿ ನಡೆಯಿತು. ಆಮಾನತ್ತುಗೊಳಿಸಿದ ಬಗ್ಗೆ ಪೊಲೀಸರ ಕುಟುಂಬಸ್ಥರು ಅಸಮಾಧಾನ ಹೊರಹಾಕಿದರು.
ಹಿರಿಯ ಅಧಿಕಾರಿಗಳಿಂದ ಬೆಂಬಲ ಸಿಗುತ್ತಿಲ್ಲ ಎಂದು ಕುಟುಂಬಸ್ಥರು ಆರೋಪಿದ್ದಾರೆ.

ಕಳೆದ ಗುರುವಾರ ರಾತ್ರಿ ಘಟನೆ ನಡೆದಿದ್ದು, 6 ಮಂದಿ ಪೊಲೀಸರ ಅಮಾನತ್ತು ಮಾಡಿ ಎಸ್ಪಿ ವಿಕ್ರಮ ಅಮಟೆ ಆದೇಶ ಹೊರಡಿಸಿದ್ದರು.
ಪೊಲೀಸರ ವಿರುದ್ದ ಎಫ್ಐಆರ್ ದಾಖಲಾಗಿತ್ತು. ನಿನ್ನೆ ಹೈಕೋರ್ಟ್ ಪ್ರಕರಣದ ಬಗ್ಗೆ ಮಾಹಿತಿ ಪಡೆದಿತ್ತು. ಮಂಗಳವಾರದ ಒಳಗೆ ವರದಿ ಹಾಗೂ ಕ್ರಮದ ಮಾಹಿತಿ ನೀಡುವಂತೆ ಸೂಚನೆ ನೀಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು