9:30 PM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಅಮಾನತುಗೊಂಡ ಪೊಲೀಸರ ಕುಟುಂಬದಿಂದ ಠಾಣೆ ಮುಂಭಾಗ ಪ್ರೊಟೆಸ್ಟ್

02/12/2023, 21:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಕೀಲರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಅಮಾನತಿಗೊಳಗಾದ 6 ಮಂದಿ ಪೊಲೀಸ್ ಸಿಬ್ಬಂದಿಗಳ ಕುಟುಂಬಸ್ಥರು ಶನಿವಾರ ಚಿಕ್ಕಮಗಳೂರು ನಗರದ ಟೌನ್ ಠಾಣೆ ಬಳಿ ಧರಣಿ ನಡೆಸಿದರು.
6 ಮಂದಿ ಪೊಲೀಸರ ವಿರುದ್ದ ಐಪಿಸಿ 307 ಅಡಿ ಪ್ರಕರಣ ದಾಖಲು ಮಾಡಲಾಗಿತ್ತು.
ಓರ್ವ ಪಿಎಸ್ ಐ, ಓರ್ವ ಎಎಸ್ಐ, ಓರ್ವ ಎಚ್.ಸಿ, ಮೂವರು ಪೇದೆಗಳ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗಿತ್ತು.
6 ಮಂದಿ ಪೊಲೀಸರನ್ನು ಬಂಧಿಸುವಂತೆ ಆಗ್ರಹಿಸಿ
ವಕೀಲರ ಸಂಘ ಪ್ರತಿಭಟನೆ ನಡೆಸಿತ್ತು.
ಇಂದು ಅಮಾನತಿಗೊಳಗಾದ ಪೊಲೀಸರ ಕುಟುಂಬದಿಂದ ಸ್ಟೇಷನ್ ಮುಂಭಾಗ ಧರಣಿ ನಡೆಯಿತು. ಆಮಾನತ್ತುಗೊಳಿಸಿದ ಬಗ್ಗೆ ಪೊಲೀಸರ ಕುಟುಂಬಸ್ಥರು ಅಸಮಾಧಾನ ಹೊರಹಾಕಿದರು.
ಹಿರಿಯ ಅಧಿಕಾರಿಗಳಿಂದ ಬೆಂಬಲ ಸಿಗುತ್ತಿಲ್ಲ ಎಂದು ಕುಟುಂಬಸ್ಥರು ಆರೋಪಿದ್ದಾರೆ.

ಕಳೆದ ಗುರುವಾರ ರಾತ್ರಿ ಘಟನೆ ನಡೆದಿದ್ದು, 6 ಮಂದಿ ಪೊಲೀಸರ ಅಮಾನತ್ತು ಮಾಡಿ ಎಸ್ಪಿ ವಿಕ್ರಮ ಅಮಟೆ ಆದೇಶ ಹೊರಡಿಸಿದ್ದರು.
ಪೊಲೀಸರ ವಿರುದ್ದ ಎಫ್ಐಆರ್ ದಾಖಲಾಗಿತ್ತು. ನಿನ್ನೆ ಹೈಕೋರ್ಟ್ ಪ್ರಕರಣದ ಬಗ್ಗೆ ಮಾಹಿತಿ ಪಡೆದಿತ್ತು. ಮಂಗಳವಾರದ ಒಳಗೆ ವರದಿ ಹಾಗೂ ಕ್ರಮದ ಮಾಹಿತಿ ನೀಡುವಂತೆ ಸೂಚನೆ ನೀಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು