1:01 AM Saturday7 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ; ಒಬ್ಬ ವ್ಯಕ್ತಿಯಿಂದಲೇ 20 ಎಕರೆಗೂ ಅಧಿಕ ಭೂಮಿ ವಶ!

11/08/2024, 21:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅರಣ್ಯ ಅಕ್ರಮ ಒತ್ತುವರಿ ತೆರವುಗೊಳಿಸುವಂತೆ ಅರಣ್ಯ ಸಚಿವರು ಆದೇಶ ನೀಡಿದ ಹಿನ್ನೆಲೆಯಲ್ಲಿ ಒತ್ತುವರಿ ವಿರುದ್ದ ಅರಣ್ಯ ಇಲಾಖೆ ಸಮರ ಸಾರಿದೆ.
ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಆದೇಶದ ಬೆನ್ನಲ್ಲೇ ಅರಣ್ಯ ಇಲಾಖೆ ಕಾರ್ಯಚರಣೆಗೆ ಇಳಿದಿದೆ.
ಕೇರಳ ದುರಂತರ ಬಳಿಕ ಒತ್ತುವರಿ ತೆರೆವಿಗೆ ಸಚಿವರು
ಆದೇಶ ನೀಡಿದ್ದರು. ಒಂದು ತಿಂಗಳೊಳಗೆ ಒತ್ತುವರಿ ತೆರವು ಗೊಳಿಸುವಂತೆ ಸಚಿವರಿಂದ ಖಡಕ್ ಸೂಚನೆ ಬಂದಿತ್ರು. ಈ ಹಿನ್ನೆಲೆಯಲ್ಲಿ ಕಾಫಿನಾಡಲ್ಲಿ ಅಕ್ರಮ ಅರಣ್ಯ ಒತ್ತುವರಿ ವಿರುದ್ಧ ಇಲಾಖೆ ಕಾರ್ಯಾಚರಣೆಗಿಳಿದಿದೆ.
20 ಎಕರೆ 11 ಗುಂಟೆ ಅರಣ್ಯ ಭೂಮಿ‌ ಒತ್ತುವರಿ ತೆರೆವು ಕಾರ್ಯ ನಡೆದಿದೆ. ವಸ್ತಾರೆ ಗ್ರಾಮದ ಸರ್ವೇ ನಂಬರ್ 368ರಲ್ಲಿ 20 ಎಕರೆ 11 ಗುಂಟೆ ಭೂಮಿ ವಶಪಡಿಸಿಕೊಳ್ಳಲಾಗಿದೆ.


ರಮೇಶ್ ಎಂಬುವರಿಂದ ಮೀಸಲು ಅರಣ್ಯ ಭೂಮಿ ಒತ್ತುವರಿ ನಡೆದಿತ್ತು.ರಮೇಶ್ ಅವರು ಒತ್ತುವರಿ ಮಾಡಿ ಕಾಫಿ-ಮೆಣಸು ಬೆಳೆಸಿದ್ದರುಮ ಇಂದು ಪೊಲೀಸರ ಸಹಕಾರದೊಂದಿಗೆ ತೆರವು ಕಾರ್ಯ ನಡೆಯಿತು.
200ಕ್ಕೂ ಹೆಚ್ಚು ಅರಣ್ಯ ಇಲಾಖೆಯ ಸಿಬ್ಬಂದಿಗಳಿಂದ‌ ತೆರವು ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು