4:42 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರಿನಲ್ಲಿ ಭಾರೀ ವರ್ಷಧಾರೆ: ಮಳೆ ನೀರು ಜತೆ ಸರಕಾರಿ ಆಸ್ಪತ್ರೆಗೆ ನುಗ್ಗಿದ ಡ್ರೈನೇಜ್ ವಾಟರ್; ಗಬ್ಬು ವಾಸನೆ; ರೋಗಿಗಳ ಪರದಾಟ

10/10/2024, 12:23

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳೆದ ರಾತ್ರಿ ಸುರಿದ ಮಳೆಯಿಂದ ಚಿಕ್ಕಮಗಳೂರಿನ ಸರ್ಕಾರಿ ಆಸ್ಪತ್ರೆ ಜಲಾವೃತವಾಗಿದೆ. ಮಳೆ ಜೊತೆ ಸರ್ಕಾರಿ ಆಸ್ಪತ್ರೆಗೆ ಡ್ರೈನೇಜ್ ನೀರು ನುಗ್ಗಿದೆ.

ಸರ್ಕಾರಿ ಆಸ್ಪತ್ರೆ ತುಂಬಾ ಮಳೆ ನೀರು ತುಂಬಿದೆ. ಗ್ರೌಂಡ್ ಫ್ಲೋರ್ ಗೆ ಮಳೆ ಜೊತೆ ಡ್ರೈನೇಜ್ ನೀರು ನುಗ್ಗಿದೆ.
ಆಸ್ಪತ್ರೆಯಲ್ಲಿ ನೀರು ತುಂಬಿದ್ದರಿಂದ ರೋಗಿಗಳ ಪರದಾಟ ನಡೆಸಬೇಕಾಯಿತು.
ಮಳೆ ನೀರು ಜತೆ ಡ್ರೈನೇಜ್ ವಾಟರ್ ಸೇರಿರುವುದರಿಂದ ಕೆಟ್ಟ ವಾಸನೆ ಬರಲಾರಂಭಿಸಿದೆ.
ಇಡೀ ರಾತ್ರಿ ಕೆಟ್ಟ ವಾಸನೆ ಮಧ್ಯೆ ಮಳೆ ನೀರಲ್ಲಿ ರೋಗಿಗಳು ಹಾಗೂ ಅವರ ಸಂಬಂಧಿಕರು ಕಾಲ ಕಳೆದರು.
ಒಂದು ಗಂಟೆಯ ಧಾರಾಕಾರ ಮಳೆಗೆ ಸರ್ಕಾರಿ ಆಸ್ಪತ್ರೆ ಜಲಾವೃತವಾಗಿತ್ತು. ಆಸ್ಪತ್ರೆಯ ಕಾರಿಡಾರ್ ನಲ್ಲಿ ಮಳೆ ನೀರು ತುಂಬಿತ್ತು. ಆಸ್ಪತ್ರೆ ತುಂಬಾ ನೀರು ತುಂಬಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು