ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ಬಾಯ್ಲರ್ ರಿಪೇರಿ ಮಾಡುವಾಗ ಹೊರ ಬಂದ ಭಾರೀ ಶಾಖದಿಂದ ಕಾರ್ಮಿಕ ಸ್ಥಳದಲ್ಲೇ ಸಾವು
02/06/2024, 09:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಬಾಯ್ಲರ್ ರಿಪೇರಿ ಮಾಡುವಾಗ ಹೊರ ಬಂದ ಭಾರೀ ಪ್ರಮಾಣದ ಶಾಖದಿಂದ ರಿಪೇರಿ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ವಿದ್ಯಾ ಕಾಫಿ ಕ್ಯೂರಿಂಗ್ ನಲ್ಲಿ ನಡೆದಿದೆ.
ಮಡಿಕೇರಿಯ ಕುಶಾಲನಗರ ಮೂಲದ ಉದಯ್ (27) ಮೃತಪಟ್ಟ ಕಾರ್ಮಿಕ.
ಬಾಯ್ಲರ್ ಶಾಖಕ್ಕೆ ಉದಯ್ ಅವರ ದೇಹ ಸುಟ್ಟು ಕರಕಲಾಗಿದೆ. ಬಾಯ್ಲರ್ ಸರಿಪಡಿಸುವಾಗ ಏಕಾಏಕಿ ಹೊರ ಬಂದ 340 ಡಿಗ್ರಿ ಶಾಖದಿಂದ ಈ ದುರ್ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಮೃತ ದೇಹ ರವಾನಿಸಲಾಗಿದೆ.
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.