5:58 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರಿನಲ್ಲಿ ಮುಂದುವರಿದ ಮಳೆ: 1 ವರ್ಷದಲ್ಲಿ ಒಂದೇ ಸ್ಥಳದಲ್ಲಿ 60ಕ್ಕೂ ಹೆಚ್ಚು ಬಾರಿ ಆಕ್ಸಿಡೆಂಟ್!

28/08/2024, 20:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಗಾಳಿ-ಮಳೆ ಅಬ್ಬರ ಮುಂದುವರಿದಿದ್ದು,ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ನಡೆದಿದೆ.


ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಹೆಬ್ಬರಿಗೆ, ನಜರತ್ ಸ್ಕೂಲ್ ಬಳಿ ಅಪಘಾತ ನಡೆದಿದೆ. ಪೌಲ್ಸನ್ ಎಂಬುವರ ಮನೆಗೆ ಕಾರು ಗುದ್ದಿದೆ.ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಇಲ್ಲಿ ಮೇಲಿಂದ ಮೇಲೆ ಅಪಘಾತಗಳು ನಡೆಯುತ್ತಿದೆ ಎಂದು ಸಾರ್ವಜನಿಕರು ಕಿಡಿ ಕಾರಿದ್ದಾರೆ. ಒಂದೇ ಜಾಗದಲ್ಲಿ ವರ್ಷದಲ್ಲಿ 60ಕ್ಕೂ ಹೆಚ್ಚು ಅಪಘಾತಗಳು ನಡೆದಿವೆ. ಮೇಲಿಂದ ಮೇಲೆ ಅನಾಹುತವಾದ್ರು ಅಧಿಕಾರಿಗಳ ಮೌನಕ್ಕೆ ಸ್ಥಳಿಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಕೂದಲೆಳೆ ಅಂತರದಲ್ಲಿ 2 ಮಕ್ಕಳು ಸೇರಿ 7 ಪ್ರಯಾಣಿಕರು ಪಾರಾಗಿದ್ದಾರೆ.
ಕೂಡಲೇ ರಸ್ತೆಯನ್ನು ದುರಸ್ಥಿ ಮಾಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಪೊಲೀಸರು ಬ್ಯಾರಿಕೇಡ್ ಹಾಕಿದ್ರು ಅದಕ್ಕೆ ಗುದ್ದಿ ಅಪಘಾತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು