8:17 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಡಿ.22 ರಿಂದ 27ರವರೆಗೆ 6 ದಿನಗಳ ಕಾಲ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ

14/12/2023, 12:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಿಗೆ ಪ್ರವಾಸಕ್ಕೆ ಬರುವ ಪ್ರವಾಸಿಗರೇ ಗಮನಹರಿಸಿ.
6 ದಿನಗಳ ಕಾಲ ಪಶ್ಚಿಮ ಘಟ್ಟಗಳ ಸಾಲಿನ ಪ್ರವಾಸಿ ತಾಣಗಳು ನಿರ್ಬಂಧ ಹೇರಲಾಗಿದೆ.
ಜಿಲ್ಲೆಯ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಸೇರಿದಂತೆ ಎಲ್ಲವೂ ಬಂದ್ ಆಗಲಿದೆ.
ಡಿ.22 ರಿಂದ 27ರವರೆಗೆ 6 ದಿನಗಳ ಕಾಲ ಗಿರಿ ಭಾಗಕ್ಕೆ ಟೂರಿಸ್ಟ್ ಬ್ಯಾನ್ ಮಾಡಲಾಗಿದೆ.
ಡಿ. 24, 25, 26ರಂದು ಕಾಫಿನಾಡ ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ ನಡೆಯಲಿದ್ದು, ಡಿ.26ರಂದು 20ಸಾವಿರಕ್ಕೂ ಅಧಿಕ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಪ್ರವಾಸಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.
ಗಿರಿ ಭಾಗದಲ್ಲಿ ಕ್ರಿಸ್ ಮಸ್ ಸೆಲೆಬ್ರೇಷನ್ ಮಾಡೋದಕ್ಕೂ ಸಾಧ್ಯವಿಲ್ಲ.
6 ದಿನಗಳ ಕಾಲ ಚಂದ್ರದ್ರೋಣ ಪರ್ವತಗಳ ಸಾಲಿನ ಪ್ರವಾಸಿ ತಾಣಗಳಿಗೆ ಟೂರಿಸ್ಟ್ ಬ್ಯಾನ್ ಮಾಡಲಾಗಿದೆ. ಡಿ.17ರಿಂದ 26ರವರೆಗೆ ನಡೆಯಲಿರುವ ದತ್ತಜಯಂತಿ ಸಂಭ್ರಮ ನಡೆಯಲಿದೆ.ಟೂರಿಸ್ಟ್ ಗಾಡಿ, ಮಾಲಾಧಾರಿಗಳ ಗಾಡಿಯಿಂದ ಟ್ರಾಫಿಕ್ ಜಾಮ್ ಸಮಸ್ಯೆ ಆಗಬಾರದೆಂದು ನಿರ್ಬಂಧ ಹಾಕಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು