1:27 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯ ವಿವಿಧ ಚರ್ಚುಗಳಲ್ಲಿ ಮಾತೆ ಮರಿಯಮ್ಮ ಸ್ಮರಣೆ: ಸಾಮೂಹಿಕ ಹೊಸಕ್ಕಿ ಊಟ

08/09/2023, 17:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮನೆಯಲ್ಲಿ ನಾವು ಹಿರಿಯರನ್ನು ಗೌರವಿಸಿದರೆ ಕುಟುಂಬದಲ್ಲಿ ಐಕ್ಯತೆ ಕಾಣಲು ಸಾಧ್ಯವಾಗುತ್ತದೆ ಎಂದು ಉಡುಪಿ ಪೆರಂಪಳ್ಳಿ ಚರ್ಚಿನ ಧರ್ಮಗುರು ಫಾ.ಸುನಿಲ್ ಡೊಮಿನಿಕ್ ಲೋಬೊ ಹೇಳಿದರು. ಅವರು ಬಣಕಲ್ ಚರ್ಚಿನಲ್ಲಿ ಮಾತೆ ಮರಿಯಮ್ಮನವರ ಹಬ್ಬದ ಪೂಜೆ ನೆರವೇರಿಸಿ ಮಾತನಾಡಿದರು.


ಒಟ್ಟಿಗೆ ಪ್ರಾರ್ಥಿಸುವ ಕುಟುಂಬ ಐಕ್ಯತೆಯಿಂದ ಬದುಕುತ್ತದೆ. ಪರಸ್ಪರ ದ್ವೇಷ, ಮತ್ಸರ, ಅಸೂಯೆ ಜೀವನ ಪ್ರೀತಿಯ ಜೀವನವಾಗದು. ಪ್ರೀತಿ, ಅನ್ಯೋನ್ಯತೆ ಒಗ್ಗಟ್ಟಿನ ಸಂಕೇತವಾಗಿದೆ. ಹಾಗೆಯೆ ತಂದೆ ತಾಯಿಯನ್ನು ಪ್ರೀತಿಸಿದರೆ ಉತ್ತಮ ಸ್ವಾಸ್ಥ್ಯ ಸಮಾಜ ನಿರ್ಮಿಸಲು ಸಾಧ್ಯವಾಗುತ್ತದೆ. ಮಕ್ಕಳು ಮೊಬೈಲ್ ಗೀಳಿನಿಂದ ದೂರವಿದ್ದು ಕುಟುಂಬದಲ್ಲಿ ಅವಿನಾಭಾವ ಸಂಬಂಧ ಪರಸ್ಪರ ವಿಚಾರ ವಿನಿಮಯದಿಂದ ಸಂಬಂಧಗಳು ಗಟ್ಟಿಗೊಳ್ಳುತ್ತವೆ. ಹೂವು ಒಂದೆ ದಿನದಲ್ಲಿ ಪರಿಮಳ ಸೂಸಿ ಬಾಡುತ್ತದೆ. ಆದರೆ ಮಾನವರಾದ ನಾವು ಜೀವಿಸುವವರೆಗೂ ಇತರರಿಗೆ ಹೂವಿನಂತೆ ಪರಿಮಳಿಸಿ ಬಡವರಿಗೆ ನೆರವಾಗಬೇಕು. ಮಾತೆ ಮರಿಯಮ್ಮನವರ ನಿಷ್ಕಳಂಕ ಪ್ರೀತಿಯನ್ನು ಗೌರವಿಸುವ ನಾವು ಹೆಣ್ಣಿಗೂ ಅಷ್ಟೇ ಗೌರವ ನೀಡಬೇಕು. ಇಂದಿನ ಸ್ಥಿತಿಯಲ್ಲಿ ಹೆಣ್ಣಿಗೆ ಭದ್ರತೆಯ ಅವಶ್ಯಕತೆಯಿದೆ. ಮಾತೆ ಮರಿಯಮ್ಮನವರ ಆದರ್ಶ ಗುಣಗಳು ನಮಗೆ ಪ್ರೇರಣೆಯಾಗಬೇಕು ಎಂದರು. ಈ ಸಂದರ್ಭದಲ್ಲಿ ಬಣಕಲ್ ಧರ್ಮಗುರು ಫಾ.ಪ್ರೇಮ್ ಲಾರೆನ್ಸ್ ಡಿಸೋಜ ಅವರು ಹಬ್ಬಕ್ಕಾಗಿ ಸಹಾಯಾಸ್ತ ನೀಡಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಹಾಯಕ ಗುರುಗಳಾದ ಫಾ.ಥಾಮಸ್ ಕಲಘಟಗಿ,ಫಾ.ಆನಂದ್ ಇದ್ದರು. ಬಣಕಲ್, ಬಾಳೂರು,ಜಾವಳಿ, ಕೊಟ್ಟಿಗೆಹಾರ, ಕುಂದೂರು ಮತ್ತಿತರ ಗ್ರಾಮಗಳ ಕ್ರೈಸ್ತರು ಒಂದೇ ಚರ್ಚಿನಲ್ಲಿ ಸಮಾವೇಶಗೊಂಡು ಹೊಸಕ್ಕಿ ಊಟವನ್ನು ನೆರೆದ ಕ್ರೈಸ್ತ ಭಕ್ತಾಧಿಗಳು ಸಾಮೂಹಿಕವಾಗಿ ಪಂಕ್ತಿಯಲ್ಲಿ ಕುಳಿತು ಸೇವಿಸುವ ಮೂಲಕ ಮಾತೆ ಮರಿಯಮ್ಮನವರ ಜಯಂತಿಯನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಿದರು. ಹಬ್ಬದ ಅಂಗವಾಗಿ ಕುಟುಂಬದವರಿಗೆ ಹೊಸಕ್ಕಿ ಭತ್ತದ ತೆನೆಯನ್ನು ವಿತರಿಸಲಾಯಿತು. ಹಬ್ಬದ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ನಡೆಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ನೆರೆದವರಿಗೆ ಸಿಹಿ ಮತ್ತು ಕಬ್ಬನ್ನು ವಿತರಿಸಲಾಯಿತು. ಕೆಳಗೂರು ಚರ್ಚಿನಲ್ಲಿ ಹಿರೇಬೈಲ್ ಧರ್ಮಗುರು ಫಾ.ಡೇವಿಡ್ ಪ್ರಕಾಶ್ ಹಬ್ಬದ ಪೂಜೆ ಅರ್ಪಿಸಿ ಮಾತನಾಡಿ ‘ಕುಟುಂಬದಲ್ಲಿ ತಾಯಿಗೆ ಮಹತ್ತರ ಪಾತ್ರವನ್ನು ನೀಡುತ್ತೇವೆ. ಏಸುವಿನ ತಾಯಿ ನಮಗೆ ಆದರ್ಶ ಮಾತೆಯಾಗಿದ್ದಾರೆ. ಅವರ ಆದರ್ಶಗಳು ನಮಗೆ ಬದುಕಲು ಪ್ರೇರಣೆಯಾಗಬೇಕು ಎಂದರು. ಗುರುಗಳು ಹೊಸ ತೆನೆಯನ್ನು ಆಶೀರ್ವಚನ ಮಾಡುವ ಮೂಲಕ ಹೊಸಕ್ಕಿ ಭತ್ತದ ತೆನೆಯನ್ನು ಭಕ್ತರಿಗೆ ಹಂಚಲಾಯಿತು. ಕೂವೆ ಹೋಲಿ ಕ್ರಾಸ್ ಚರ್ಚಿನಲ್ಲಿ ಉಜಿರೆ ದಯಾಳ್ ಬಾಗ್ ಧರ್ಮಗುರು ಫಾ.ಚಾರ್ಲ್ಸ್ ಸಲ್ಡಾನ ಹಬ್ಬದ ಬಲಿಪೂಜೆಯನ್ನು ಅರ್ಪಿಸಿ ಮಾತನಾಡಿ, ಮಾತೆ ಮರಿಯಮ್ಮನವರರಿಗೆ ವಿವಿಧ ಹೂಗಳ ಮೂಲಕ ಪ್ರಾಮುಖ್ಯತೆಯನ್ನು ನೀಡುತ್ತೇವೆ. ವಿವಿಧ ಹೂಗಳು ವಿವಿಧ ಸಂದೇಶಗಳನ್ನು ನೀಡುತ್ತವೆ. ಬಿಳಿಯ ಹೂಗಳು ಶುಭ್ರತೆ ಮತ್ತು ಸ್ವಚ್ಚತೆಯನ್ನು ಸೂಚಿಸುತ್ತವೆ. ಕೆಂಪು ಹೂಗಳು ತ್ಯಾಗ ಮತ್ತು ಸೇವಾ ಮನೋಭಾವನೆಯನ್ನು ಸೂಚಿಸುತ್ತವೆ. ಮರಿಯಮ್ಮನವರ ಸರಳ ಜೀವನ ನಮಗೆಲ್ಲಾ ಮಾದರಿಯಾಗಿದೆ. ಈ ಹಬ್ಬ ಕುಟುಂಬದ ಹಬ್ಬವಾಗಿದೆ’ ಎಂದರು.ಪೂಜೆಯ ಮುನ್ನ ಕೂವೆ ಪಟ್ಟಣದಿಂದ ಚರ್ಚ್ ವರೆಗೂ ಭಾಲಿಕಾ ಮರಿಯ ಪ್ರತಿಮೆ ಜೊತೆಗೆ ಮೆರವಣಿಗೆ ನಡೆಸಲಾಯಿತು. ಕೂವೆ ಚರ್ಚಿನ ಧರ್ಮಗುರು ಫಾ.ಲ್ಯಾನ್ಸಿ ಪಿಂಟೊ ಇದ್ದರು. ಹಬ್ಬದ ಪರವಾಗಿ ವಿವಿಧ ಕಾರ್ಯಕ್ರಮಗಳು ನಡೆದವು. ನೆರೆದವರಿಗೆ ಸಿಹಿ, ಕಬ್ಬು, ಹೊಸಕ್ಕಿ ಭತ್ತದ ತೆನೆ ಹಂಚಲಾಯಿತು. ವಾಟೇಖಾನ್, ನಿಡುವಾಳೆ, ಚಂದುವಳ್ಳಿ ಸುತ್ತಮುತ್ತಲಿನ ಕ್ರೈಸ್ತ ಭಕ್ತಾಧಿಗಳು ಹಬ್ಬದ ಪೂಜೆಯಲ್ಲಿ ಜಮಾಯಿಸಿದ್ದರು. ಧರ್ಮಗುರುಗಳು ಭತ್ತದ ತೆನೆಯನ್ನು ಆಶೀರ್ವಚನ ನೀಡಿ ಭಕ್ತರಿಗೆ ಹಂಚಲಾಯಿತು.ಸಿಹಿ, ಕಬ್ಬು ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು